- Advertisement -
- Advertisement -
ಮಂಗಳೂರು : 2025-26 ನೇ ಸಾಲಿನ ಪ್ರಥಮ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ ಪ್ರಗತಿ ಪರಿಶೀಲನ ಸಭೆಯು ಜೂನ್.30 ರ ಸೋಮವಾರ ಪೂರ್ವಹ್ನ 10:30 ಗಂಟೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಇವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಂಭಾಗಣ ಮಂಗಳೂರು ಇಲ್ಲಿ ನಡೆಯಲಿರುತ್ತದೆ ಎಂದು ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಆದ್ದರಿಂದ ಸಾರ್ವಜನಿಕರು ಸರಕಾರಿ ಕಾಮಗಾರಿಗಳ ಹಾಗೂ ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಕಛೇರಿಗೆ ಮಾಹಿತಿಗಳನ್ನು ನೀಡುವಂತೆ ಕೋರಲಾಗಿರುತ್ತದೆ.
- Advertisement -