Thursday, June 26, 2025
Homeಚಿಕ್ಕಮಗಳೂರುಚಿಕ್ಕಮಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರಾದ ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ

ಚಿಕ್ಕಮಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರಾದ ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ

spot_img
- Advertisement -
- Advertisement -

ಚಿಕ್ಕಮಗಳೂರು;  ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿಯನ್ನ ಕೇರಳ ಪೊಲೀಸರು ಚಿಕ್ಕಮಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನಕ್ಸಲ್ ಹೋರಾಟದ ಹಾದಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಮೇಲೆ ಚಿಕ್ಕಮಗಳೂರು, ಉಡುಪಿ ಹಾಗೂ ಮಂಗಳೂರು ಹಲವು ಪ್ರಕರಣಗಳು ದಾಖಲಾಗಿದ್ದವು. ವಿಚಾರಣೆ ಸಂಬಂಧ ಕೇರಳ ಪೊಲೀಸರು ಚಿಕ್ಕಮಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಬಿ.ಜಿ.ಕೃಷ್ಣಮೂರ್ತಿ ಮೇಲೆ ಒಟ್ಟು 66 ಪ್ರಕರಣಗಳು ದಾಖಲಾಗಿವೆ. ಇಂದು ಚಿಕ್ಕಮಗಳೂರು ಜಿಲ್ಲೆಯ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಜುಲೈ 21ಕ್ಕೆ ಮುಂದೂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ನಾಯಕ ಸಾಕೇತ್ ರಾಜನ್ ಎನ್ಕೌಂಟರ್ ಆದ ಬಳಿಕ ಸುಮಾರು ಒಂದೂವರೆ ದಶಕಗಳ ಕಾಲ ಬಿ.ಜಿ.ಕೃಷ್ಣಮೂರ್ತಿ ನಕ್ಸಲ್ ನಾಯಕತ್ವ ವಹಿಸಿಕೊಂಡಿದ್ದರು. 2014ರ ಬಳಿಕ ನಿರಂತರ ಕಾಂಬಿಂಗ್, ಮಲೆನಾಡಿಗರ ಬೆಂಬಲ ಕಡಿಮೆಯಾದ ಹಿನ್ನೆಲೆ ಬಿ.ಜಿ.ಕೃಷ್ಣಮೂರ್ತಿ ಸೇರಿ ಹಲವಾರು ನಕ್ಸಲರು ಕೇರಳತ್ತ ಮುಖ ಮಾಡಿದ್ದರು. ಕಳೆದ ವರ್ಷ ಸರ್ಕಾರದ ಪ್ಯಾಕೇಜ್ ಅಡಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಪೊಲೀಸರಿಗೆ ಶರಣಾಗಿದ್ದರು. ಅವರು ಶರಣಾದ ಬಳಿಕ ಸುಮಾರು 8 ಜನ ನಕ್ಸಲರು ಕರ್ನಾಟಕದಲ್ಲಿ ಶರಣಾಗತಿಯಾಗಿದ್ದರು. 7 ಜನ ಸಿಎಂ ಮುಂದೆ ಶರಣಾಗಿದ್ದರೆ, ಓರ್ವ ಚಿಕ್ಕಮಗಳೂರು ಎಸ್ಪಿ ಮುಂದೆ ಶರಣಾಗಿದ್ದನು. ಇಂದು ವಿಚಾರಣೆ ಮುಗಿದ ಬಳಿಕ ಕೇರಳ ಪೊಲೀಸರು ಬಿ.ಜಿ.ಕೃಷ್ಣಮೂರ್ತಿಯನ್ನ ಮತ್ತೆ ತಮ್ಮ ವಶಕ್ಕೆ ಪಡೆದು ಕರೆದೊಯ್ದರು.

- Advertisement -
spot_img

Latest News

error: Content is protected !!