- Advertisement -
- Advertisement -
ಪುತ್ತೂರು; ಅನುಮತಿ ಪಡೆಯದೇ SDPI ಯಿಂದ ಪ್ರತಿಭಟನೆ ಆಯೋಜನೆ ಮಾಡಿದ್ದಕ್ಕೆ ಸಂಬಂಧಪಟ್ಟಂತೆ 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ದಿನಾಂಕ 02.07.2025 ರಂದು ಸಂಜೆ, ಪುತ್ತೂರು, ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನದ ಬಳಿ, SDPI ಪುತ್ತೂರು ವಿಧಾನಸಭಾ ಕ್ಷೇತ್ರ, ಪುತ್ತೂರು ವತಿಯಿಂದ ಅಧ್ಯಕ್ಷ ಅಶ್ರಫ್ ಬಾವು ಎಂಬವರು ಹಾಗೂ ಇತರೆ ಸುಮಾರು 30 ಜನರು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೇ, ಅಕ್ರಮ ಗುಂಪು ಸೇರಿ, ಧ್ವನಿವರ್ಧಕವನ್ನು ಬಳಸಿ, ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -