ಮಂಗಳೂರು; ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ರಾಘವೇಂದ್ರ ಭಟ್ ನೇಮಕವಾಗಿದ್ದಾರೆ.
ಜುಲೈ 16 ರಿಂದ ಜಾರಿಗೆ ಬರುವಂತೆ ಈ ನೇಮಕಾತಿ ನಡೆದಿದ್ದು, ಈ ನೇಮಕಾತಿಯು ಮುಂದಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಥವಾ SEBI ನಿಯಮಗಳು, 2015 ರ ಪ್ರಕಾರ, ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮೂರು ತಿಂಗಳ ಅವಧಿಯೊಳಗೆ, ಯಾವುದು ಮೊದಲೋ ಅದರೊಳಗೆ ಷೇರುದಾರರ ಅನುಮೋದನೆಗೆ ಒಳಪಟ್ಟಿರುತ್ತದೆ ಎಂದು ಬ್ಯಾಂಕ್ ಸೋಮವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.
ಇದಕ್ಕೂ ಮೊದಲು ರಾಘವೇಂದ್ರ ಭಟ್ ಸುಮಾರು ನಾಲ್ಕು ದಶಕಗಳ ಕಾಲ ಬ್ಯಾಂಕಿನಲ್ಲಿ ಮುಖ್ಯ ಕಾರ್ಯಾಚರಣಾ ಅಧಿಕಾರಿ (COO) ಸೇರಿದಂತೆ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. ಈ ನೇಮಕಾತಿ ಬಗ್ಗೆ ಮಾಹಿತಿ ನೀಡಿರುವ ಬ್ಯಾಂಕಿನ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ರಾಘವೇಂದ್ರ ಭಟ್ ಅವರನ್ನು ಮತ್ತೆ ಸ್ವಾಗತಿಸಲು ನಮಗೆ ಸಂತೋಷವಾಗಿದೆ. ಅವರ ಅನುಭವ ಮತ್ತು ಪರಿಣತಿಯ ಸಂಪತ್ತು ನಮ್ಮ ನಿರಂತರ ಬೆಳವಣಿಗೆ ಮತ್ತು ಯಶಸ್ಸಿಗೆ ಕಾರಣವಾಗಲಿದೆ. ನಮ್ಮ ಗ್ರಾಹಕರು ಮತ್ತು ಷೇರುದಾರರಿಗೆ ಮೌಲ್ಯವನ್ನು ತಲುಪಿಸುವಲ್ಲಿ ಅವರೊಂದಿಗೆ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.
ಒಂದು ಶತಮಾನಕ್ಕೂ ಹೆಚ್ಚು ಕಾಲ ಬ್ಯಾಂಕ್ ನಿರ್ಮಿಸಿದ ನಂಬಿಕೆ ಮತ್ತು ಸದ್ಭಾವನೆಯೊಂದಿಗೆ, ಆ ಬಲವಾದ ಅಡಿಪಾಯದ ಮೇಲೆ ಮತ್ತಷ್ಟು ನಿರ್ಮಿಸಲು ಮತ್ತು ಬೆಳೆಯಲು ಎಲ್ಲಾ ಪಾಲುದಾರರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ರಾಘವೇಂದ್ರ ಭಟ್ ಹೇಳಿದರು.


