- Advertisement -
![]()
- Advertisement -
ನೆಲ್ಯಾಡಿ: ಕೊಕ್ಕಡ ಅಂಚೆ ಕಚೇರಿಯಲ್ಲಿ ಅಂಚೆಪಾಲಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ಬಾಲಕೃಷ್ಣ ಹೊಸಮಜಲು(70) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಜುಲೈ 19 ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ..
ಸೇವಾ ಮನೋಭಾವನೆ, ಕರ್ತವ್ಯನಿಷ್ಠೆ ಹಾಗೂ ಸರಳ ಜೀವನಶೈಲಿ ಮೂಲಕ ಅವರ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ನಿವೃತ್ತಿಯ ಬಳಿಕ ಹೊಸಮಜಲಿನಲ್ಲಿ ಕುಟುಂಬದೊಂದಿಗೆ ವಿಶ್ರಾಂತ ಜೀವನ ನಡೆಸುತ್ತಿದ್ದರು.ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂರು ಗಂಡುಮಕ್ಕಳನ್ನು ಅಗಲಿದ್ದಾರೆ.
- Advertisement -


