Friday, June 5, 2026
Homeಕರಾವಳಿಮಂಗಳೂರುಸರಕಾರಿ ಶಾಲೆಯಲ್ಲಿ ಬಿಸಿಯೂಟ ಸವಿದ ಶಾಸಕ ಅಶೋಕ್ ರೈ; ಬಿಸಿಯೂಟದ ಬಗ್ಗೆ ಪರಿಶೀಲನೆ ಮಾಡುವುದು ನನ್ನ...

ಸರಕಾರಿ ಶಾಲೆಯಲ್ಲಿ ಬಿಸಿಯೂಟ ಸವಿದ ಶಾಸಕ ಅಶೋಕ್ ರೈ; ಬಿಸಿಯೂಟದ ಬಗ್ಗೆ ಪರಿಶೀಲನೆ ಮಾಡುವುದು ನನ್ನ ಕರ್ತವ್ಯ ಎಂದ ಶಾಸಕರು

- Advertisement -
- Advertisement -

ಪುತ್ತೂರು: ಮಂಗಳವಾರ ಮಧ್ಯಾಹ್ನ ದಿಢೀರನೆ ಪುತ್ತರು ನಗರದ ಹೊರವಲಯದ ಪರ್ಲಡ್ಕ ಸರಕಾರಿ ಹಿ ಪ್ರಾ ಶಾಲೆಗೆ ತೆರಳಿದ ಶಾಸಕರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಬಿಸಿಯೂಟವನ್ನು ಪರಿಶೀಲನೆ ನಡೆಸಿ ಮಕ್ಕಳ ಜೊತೆ ತನೂ ಬಿಸಿಯೂಟವನ್ನು ಸವಿದಿದ್ದಾರೆ.

ಊಟದ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಶಾಸಕರು ದಿನಾಲೂ ಊಟ ಚೆನ್ನಾಗಿರುತ್ತದಾ? ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರ, ಮೊಟ್ಟೆ ಕೊಡ್ತಾರ ಎಂದು ಮಕ್ಕಳಲ್ಲಿ ಕೇಳಿ ಮಾಹಿತಿ ಪಡೆದುಕೊಂಡರು. ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿಗಳು ಊಟ ಚೆನ್ನಾಗಿರುತ್ತದೆ ಎಂದು ಹೇಳಿದರು.

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಶಾಸಕರು ಸರಕಾರ ಪ್ರತೀ ಶಾಲೆಯಲ್ಲೂ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿದೆ. ಮಕ್ಕಳಿಗೆ ಸರಿಯಾದ ಪೌಷ್ಠಿಕಾಂಶಯುಕ್ತ ಆಹಾರವನ್ನು ಕೊಡಬೇಕು ಎಂಬ ಉದ್ದೇಶದಿಂದ ಸರಕಾರ ಮಕ್ಕಳ ಊಟದ ಜೊತೆ ಮೊಟ್ಟೆಯನ್ನು ನೀಡುತ್ತಿದೆ. ಸರಕಾರದಿಂದ ಸಿಗುವ ಈ ಸವಲತ್ತು ಪ್ರತೀ ಶಾಲೆಗೂ ತಲುಪುತ್ತದೆ ಆದರೆ ಶಾಲೆಯಲ್ಲಿ ಮಕ್ಕಳಿಗೆ ಸರಿಯಾದ ಬಿಸಿಯೂಟ ದೊರೆಯುತ್ತದಾ ಎಂಬುದನ್ನು ಪರಿಶೀಲನೆ ಮಾಡುವುದು ಓರ್ವ ಶಾಸಕನಾದ ನನ್ನ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಇಂದು ನಗರದ ಪರ್ಲಡ್ಕ ಸರಕಾರಿ ಶಾಲೆಗೆ ಬಂದು ಪರಿಶೀಲನೆ ನಡೆಸಿದ್ದೇನೆ. ಇಲ್ಲಿ ಊಟವನ್ನು ಮಾಡಿದ್ದೇನೆ ಚೆನ್ನಾಗಿದೆ. ಸಾಂಬಾರಿನಲ್ಲಿ ತುಂಡು ತರಕಾರಿಯೂ ಸಿಕ್ಕಿದೆ ಎಂದು ಹೇಳಿದರು.

ಮೆಣಸು ಕಡಿದು ಹಾಕಿ

ರೆಡಿಮೇಡ್ ಮೆಣಸಿನ ಹುಡಿ, ಸಾಂಬಾರ್ ಹುಡಿಯನ್ನು ಬಳಸದೆ ಅವೆಲ್ಲವನ್ನೂ ಕಡಿದು ಹಾಕುವಂತೆ ತಿಳಿಸಿದ್ದೇನೆ. ಪರ್ಲಡ್ಕ ಶಾಲೆಯಲ್ಲಿ ಇವೆಲ್ಲವನ್ನೂ ಕಡಿದೇ ಹಾಕಿದ್ದಾರೆ. ಸರಿಯಾದ ಸಮಯಕ್ಕೆ ಮಕ್ಕಳಿಗೆ ಊಟ ಹಾಕುವಂತೆಯೂ ಸೂಚನೆಯನ್ನು ನೀಡಿದ್ದೇನೆ ಎಂದು ಶಾಸಕರು ತಿಳಿಸಿದರು. ಮುಂದಿನ ದಿನಗಳಲ್ಲಿ ತಾಲೂಕಿನ ವಿವಿಧ ಶಾಲೆಗಳಿಗೆ, ಅಂಗನವಾಡಿಗಳಿಗೆ, ಹಾಸ್ಟೆಲ್‌ಗಳಿಗೆ ತೆರಳಿ ಅಲ್ಲಿ ಮಕ್ಕಳಿಗೆ ಕೊಡುತ್ತಿರುವ ಆಹಾರವನ್ನು ಪರಿಶೀಲನೆ ಮಾಡಲಿದ್ದಾರೆ.

- Advertisement -

Latest News

error: Content is protected !!