Friday, June 5, 2026
Homeತಾಜಾ ಸುದ್ದಿಸಾರಿಗೆ ನೌಕರರ ಬೇಡಿಕೆ ಈಡೇರದಿದ್ದರೆ ಕರ್ನಾಟಕ ಬಂದ್‌ಗೆ ಕರೆ; ಎಚ್ಚರಿಕೆ ನೀಡಿದ ವಾಟಾಳ್‌ ನಾಗರಾಜ್‌

ಸಾರಿಗೆ ನೌಕರರ ಬೇಡಿಕೆ ಈಡೇರದಿದ್ದರೆ ಕರ್ನಾಟಕ ಬಂದ್‌ಗೆ ಕರೆ; ಎಚ್ಚರಿಕೆ ನೀಡಿದ ವಾಟಾಳ್‌ ನಾಗರಾಜ್‌

- Advertisement -
- Advertisement -

ರಾಜ್ಯದೆಲ್ಲಡೆ ಸಾರಿಗೆ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಮುಷ್ಕರ ನಡೆಸುತ್ತಿರುವ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದು, ನೌಕರರ ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಬೇಡಿಕೆ ಸರಿಯಾಗಿದೆ. ಅವರ 36 ತಿಂಗಳ ಸಂಬಳ ಯಾಕೆ ಬಾಕಿ ಇಟ್ಟುಕೊಂಡಿದ್ದೀರಿ? ಎಂದು ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಹಾಗೂ ರಾಮಲಿಂಗಾರೆಡ್ಡಿ ಅವರು ಕೂಡಲೇ ನೌಕರರ ಬೇಡಿಕೆ ಈಡೇರಿಸಬೇಕು. ನೌಕರರ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಒಂದು ವೇಳೆ ಸರ್ಕಾರವು ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ನಾವು ಕೂಡ ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

- Advertisement -

Latest News

error: Content is protected !!