Wednesday, June 24, 2026
Homeಕರಾವಳಿಮಂಗಳೂರುಮಂಗಳೂರು; ಬೆಂಗಳೂರಿನಲ್ಲಿ ಕೆಲಸಕ್ಕೆಂದು ಹೋದ ಯುವಕ ನಾಪತ್ತೆ

ಮಂಗಳೂರು; ಬೆಂಗಳೂರಿನಲ್ಲಿ ಕೆಲಸಕ್ಕೆಂದು ಹೋದ ಯುವಕ ನಾಪತ್ತೆ

- Advertisement -
- Advertisement -

ಮಂಗಳೂರು; ಬೆಂಗಳೂರಿನಲ್ಲಿ ಕೆಲಸಕ್ಕೆಂದು ಹೋದ ಯುವಕ ನಾಪತ್ತೆಯಾಗಿರುವ ಘಟನೆ ಕೊಣಾಜೆಯಲ್ಲಿ ನಡೆದಿದೆ. ಮೊಹಮ್ಮದ್ ನಿಯಾಜ್ (33) ನಾಪತ್ತೆಯಾದ ಯುವಕ.

ಮೊಹಮ್ಮದ್ ನಿಯಾಜ್ ದೇರಳಕಟ್ಟೆಯ ಎಸ್ ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಆಗಸ್ಟ್ 2 ತನ್ನ ತಾಯಿ ಹಾಜಿರ ಅರವರಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ಹೋಗಿದ್ದಾರೆ.  ಅದೇ ದಿನ ಮಧ್ಯಾಹ್ನ ಪತ್ನಿಗೆ ಕರೆ ಮಾಡಿ ಮಾಡಿ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ನನ್ನ ತಂಗಿ ಮಗುವನ್ನು ನೋಡಲು ಹೋಗೋಣ ನೀನು ರೆಡಿಯಾಗಿರು ಎಂದು ತಿಳಿಸಿರುವುದಾಗಿ ಹೇಳಿರುತ್ತಾರೆ.

ನಂತರ ಪತ್ನಿ ಮೊಹಮ್ಮದ್ ನಿಯಾಜ್ ನಿಗೆ ಫೋನ್ ಕರೆ ಮಾಡಿದಾಗ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಬಳಿಕ ಯುವಕನ ಕುಟುಂಬದವರು ಆತನ ಸ್ನೇಹಿತರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದ್ದಾರೆ. ಆದರೆ ಆತನ ಸುಳಿವು ಸಿಗದ ಕಾರಣ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.  ಮೊಹಮ್ಮದ್ ನಿಯಾಜ್ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು, ಕೊಣಜೆ ಪೊಲೀಸ್ ಠಾಣೆ, ಮಂಗಳೂರು ನಗರ ಮೊಬೈಲ್ ನಂಬರ್ 9480802315, 9019873901 ಅಥವಾ ದೂರವಾಣಿ ಸಂಖ್ಯೆ 0824-2220536, 0824-2220800 e-mail address:- [email protected] ಗೆ ಸಂಪರ್ಕಿಸಲು ಕೋರಲಾಗಿದೆ

- Advertisement -

Latest News

error: Content is protected !!