- Advertisement -
![]()
- Advertisement -
ಚಿಕ್ಕಮಗಳೂರು : ಚಾರ್ಮಾಡಿ ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಆ.11 ರಂದು ಮಧ್ಯಾಹ್ನ ಅವಘಡ ಸಂಭವಿಸಿ 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದು ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (21) ಗಾಯಗೊಂಡಿದ್ದಾನೆ. ತಕ್ಷಣ ಸ್ಥಳೀಯರು ಮತ್ತು ಸ್ನೇಹಿತರು ಸಹಾಯಕ್ಕೆ ಧಾವಿಸಿ, ಅವನನ್ನು ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರು ಆಸ್ಪತ್ರೆಗೆ ರವಾನಿಸಿದರು.
ಚಾರ್ಮಾಡಿ ಘಾಟ್ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗವಾಗಿದ್ದು, ಪ್ರವಾಸಿಗರು ಆಗಾಗ ಭೇಟಿ ನೀಡುವ ಸ್ಥಳವಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತು ಪ್ರಪಾತದ ಅಂಚು ಜಾರುವಿಕೆ ಅಪಾಯವಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


