Monday, June 8, 2026
Homeತಾಜಾ ಸುದ್ದಿಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನ ವಿಫಲಗೊಳಿಸಿದ ಭಾರತೀಯ ಸೇನೆ; ಓರ್ವ ಸೈನಿಕ ಹುತಾತ್ಮ

ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನ ವಿಫಲಗೊಳಿಸಿದ ಭಾರತೀಯ ಸೇನೆ; ಓರ್ವ ಸೈನಿಕ ಹುತಾತ್ಮ

- Advertisement -
- Advertisement -

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆಗಳು ವಿಫಲಗೊಳಿಸಿದ್ದು, ಈ ವೇಳೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಆಗಸ್ಟ್.‌11ರಂದು ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರಾಷ್ಟ್ರೀಯ ಗಡಿಯ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ಬಿಎಸ್‌ಎಫ್‌ ಸಿಬ್ಬಂದಿ ಗುಂಡು ಹಾರಿಸಿದ ನಂತರ ಗಾಯಗೊಂಡ ಪಾಕಿಸ್ತಾನಿ ಒಳನುಸುಳುಕೋರರನ್ನು ಬಂಧಿಸಲಾಗಿತ್ತು.

- Advertisement -

Latest News

error: Content is protected !!