- Advertisement -
![]()
- Advertisement -
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಬಿಜೆಪಿ ಸಮಾವೇಶ ನಡೆಯುತ್ತಿದ್ದು ಸಮಾವೇಶದ ಬಳಿಕ ಬಿಜೆಪಿ ನಾಯಕರು ಪಾಪಿಗಳಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಈ ವೇಳೆ ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಬಿ ವೈ ವಿಜಯೇಂದ್ರ ಸೌಜನ್ಯ ತಾಯಿಯನ್ನು ಭೇಟಿಯಾಗಿದ್ದೇನೆ. ಸಿಬಿಐ ಕೋರ್ಟ್ ನಿಂದ ಬಂದಿರುವ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಆಗೋ ವೆಚ್ಚವನ್ನು ಭರಿಸಲು ಬಿಜೆಪಿ ಸಿದ್ಧವಿದೆ ಎಂದರು.
- Advertisement -


