Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

ಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ ನಡೆಯಿತು. ಶಿವಮೊಗ್ಗದಿಂದ ಆರಂಭವಾದ ಜಾಥಾ ಧರ್ಮಸ್ಥಳಕ್ಕೆ ಸೆ.2 ರಂದು ಸಂಜೆ ತಲುಪಿತು. ಜಾಥಾದಲ್ಲಿ 200 ಕ್ಕೂ ಹೆಚ್ಚು ವಾಹನದಲ್ಲಿ 1500ಕ್ಕೂ ಹೆಚ್ಚು ಧರ್ಮ ಭಕ್ತರು ಆಗಮಿಸಿದರು.

ಈ ವೇಳೆ ಈಶ್ವರಪ್ಪ ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಗೌರವ ಸಲ್ಲಿಕೆ ಮಾಡಲಾಯ್ತು. ಇನ್ನು ಜಾಥದ ಜೊತೆಗೆ ತುಂಗಾ-ಗಂಗಾ-ನೇತ್ರಾವತಿಯ ಪವಿತ್ರ ನದಿಯಿಂದ  ನೀರನ್ನು ತರಲಾಗಿದ್ದು, ಧರ್ಮಸ್ಥಳದಲ್ಲಿ ಮೂರು ನದಿಯ ನೀರು ಪ್ರೋಕ್ಷಣೆ ಮಾಡಲಾಯಿತು.  ಜಾಥಾ ತಲುಪಿದ ಬಳಿಕ ಮಾತನಾಡಿದ ಕೆ.ಎಸ್ ಈಶ್ವರಪ್ಪ , ನಾವು ಧರ್ಮಸ್ಥಳ ಶುದ್ಧಿಕರಣ ಮಾಡಲು ಬಂದಿದ್ದೇವೆ. ಕಾಶಿಯಿಂದ ಗಂಗಾ ಜಲ, ಶಿವಮೊಗ್ಗದಿಂದ ತುಂಗಾ, ಧರ್ಮಸ್ಥಳದಿಂದ ನೇತ್ರಾವತಿ ನೀರು ತಂದಿದ್ದೇವೆ.

ರಸ್ತೆಯಲ್ಲಿ ಪ್ರೋಕ್ಷಣೆ ಮಾಡಿ ಶುದ್ಧ ಮಾಡುತ್ತೇವೆ. ಅಂದೇ ಸುಳ್ಳು ವಿಚಾರಗಳನ್ನು ಮುಂದಿಟ್ಟುಕೊಂಡು ಬಂದಿದ್ದವರನ್ನು ಅರೆಸ್ಟ್ ಮಾಡಿ ಒದ್ದು ಒಳಗೆ ಹಾಕಿದಿದ್ರೆ ಈ ಮಟ್ಟಿಗೆ ಈ ವಿಚಾರ ಬೆಳೆಯುತ್ತಿರಲಿಲ್ಲ. ಈಗ ಅವರ ಬಾಯಲ್ಲೇ ಎಲ್ಲಾ ಸತ್ಯ ಹೊರಬರುತ್ತಿದೆ.ಸರ್ಕಾರ ಇವರನ್ನ ಇಲ್ಲಿವರೆಗೆ ಬಿಟ್ಟದ್ದೇ ತಪ್ಪು.ವಿದೇಶಿ ಹಣ ಬಂದಿದೆ, ರಾಷ್ಟ್ರದ್ರೋಹಿಗಳು ಇದರಲ್ಲಿ ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದರು. ಎಸ್.ಐ.ಟಿ. ತನಿಖೆ ಸರಿಯಾದ ದಾರಿಯಲ್ಲಿದೆ ಇದರಿಂದ  ಸಾಕಷ್ಟು ಮಾಹಿತಿ ಹೊರಬಂದಿದೆ, ಅವರಿಗೆ ಧನ್ಯವಾದ ಎಂದರು.  ಪ್ರಕರಣದ ಸಮಗ್ರವಾದ ತನಿಖೆಗಾಗಿ  ಎನ್.ಐ.ಎ‌.ಗೆ ಕೊಡಬೇಕು.  ಈ ಪ್ರಕರಣದ ಹಿಂದೆ ಇರುವ ಸಮೀರನಿಗೆ ಎಸ್ ಡಿ ಪಿಐ ಬೆಂಬಲ ಇದೆ. ವಕೀಲರುಗಳಿಗೆ ಹಣ ಎಲ್ಲಿಂದ ಸಿಗುತ್ತಿದೆ. ವಿದೇಶದ ಕಾಣದ ಕೈಗಳು ಕೆಲಸ ಮಾಡುತ್ತಿರುವ ಅನುಮಾನವಿದೆ ಎಂದು ಅವರು ಆರೋಪಿಸಿದರು.

- Advertisement -

Latest News

error: Content is protected !!