Wednesday, June 24, 2026
Homeಅಪರಾಧಇಂದು ನ್ಯಾಯಾಲಯದಲ್ಲಿ ಮಹೇಶ್ ವಿಕ್ರಮ್ ಹೆಗ್ಡೆ ಜಾಮೀನು ಅರ್ಜಿ ವಿಚಾರಣೆ

ಇಂದು ನ್ಯಾಯಾಲಯದಲ್ಲಿ ಮಹೇಶ್ ವಿಕ್ರಮ್ ಹೆಗ್ಡೆ ಜಾಮೀನು ಅರ್ಜಿ ವಿಚಾರಣೆ

- Advertisement -
- Advertisement -

ಮೂಡುಬಿದಿರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋ ಬಳಸಿ   ಮದ್ದೂರು ಗಣೇಶೋತ್ಸವ ಘರ್ಷಣೆಗೆ ಸಂಬಂಧಿಸಿದಂತೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇಲೆ ಟಿವಿ ವಿಕ್ರಮದ ಮಹೇಶ್ ವಿಕ್ರಮ್ ಹೆಗ್ಡೆ ಅವರನ್ನ ಬಂಧಿಸಿದ್ದು, ಇದೀಗ ಜಾಮೀನು ಅರ್ಜಿಯನ್ನು ಸೋಮವಾರ ಮೂಡುಬಿದಿರೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.

ಭಾನುವಾರ ಸಂಜೆ, ಹಿಂದೂ ಸಮುದಾಯದ ಪ್ರಮುಖ ಸದಸ್ಯರು ಮೂಡುಬಿದಿರೆಯ ಹನುಮಾನ್ ದೇವಸ್ಥಾನದಲ್ಲಿ ಜಮಾಯಿಸಿ ಹೆಗ್ಡೆ ಅವರ ಬಂಧನವನ್ನು ಪ್ರತಿಭಟಿಸಿದರು ಎನ್ನಲಾಗಿದೆ.

ಇನ್ನು ವಿಚಾರಣೆಯ ಸಮಯದಲ್ಲಿ ಸಾರ್ವಜನಿಕ ಅಭಿಯೋಜಕರು ಹೇಳಿಕೆಯನ್ನು ದಾಖಲಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!