- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಅಶ್ರಯ ನೀಡಿದ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಶೋಧದ ವೇಳೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲಿಸಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗಲು ಎರಡು ನೋಟಿಸ್ ಮನೆಯ ಗೋಡೆಗೆ ಅಂಟಿಸಿದ್ದರು. ಎರಡನೇ ನೋಟಿಸ್ ಸೆ.25 ರಂದು ವಿಚಾರಣೆಗೆ ಹಾಜರಾಗಲು ಗಡುವು ನೀಡಲಾಗಿದೆ. ಒಂದು ವೇಳೆ ನಾಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬೆಳ್ತಂಗಡಿ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಲಿದ್ದಾರೆ
ಒಂದು ವೇಳೆ ನಾಳೆ ವಿಚಾರಣೆಗೆ ಹಾಜರಾದರೆ ತನಿಖಾಧಿಕಾರಿ ತನಿಖೆ ಮಾಡಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
- Advertisement -


