Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ತಿಮರೋಡಿ ಮನೆಗೆ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ತಿಮರೋಡಿ ಮನೆಗೆ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ಹಾಜರಾಗದ ಕಾರಣ ಮತ್ತೆ ಸೆ.26 ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ನೋಟೀಸ್ ಸೆ.29 ಕ್ಕೆ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಪ್ರಕರಣ ದಾಖಲಾದ ಬಳಿಕ ಕಳೆದ ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದು ಮೂರನೇ ನೋಟಿಸ್ ಗೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿ ಕರೆದುಕೊಂಡು ಬಂದು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ.

ತಿಮರೋಡಿಗೆ ಒಂದು ಕಡೆ ಬಂದೂಕು ಪ್ರಕರಣ ಮತ್ತೊಂದು ಕಡೆ ಜಿಲ್ಲೆಯಿಂದ ಗಡಿಪಾರು ಆದೇಶ ಪ್ರಕರಣದಿಂದ ಬೆಳ್ತಂಗಡಿ ಬಿಟ್ಟು ಪರಾರಿಯಾಗಿದ್ದಾರೆ.

- Advertisement -

Latest News

error: Content is protected !!