- Advertisement -
![]()
- Advertisement -
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು 56 ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ಸಾವಿರಾರು ಅಭಿಮಾನಿಗಳು ಸಚಿವರ ಬೆಂಗಳೂರು ನಿವಾಸಕ್ಕೆ ಆಗಮಿಸಿ ಶುಭಾಶಯ ಕೋರಿದರು.
ಇದೇ ವೇಳೆ ಸಚಿವರ ನಿವಾಸದಲ್ಲಿ ವಿಶೇಷ ಪೂಜೆ ಹಾಗೂ ಹೋಮ ಹವನ ಹಮ್ಮಿಕೊಳ್ಳಲಾಗಿತ್ತು.
ಸಚಿವ ದಿನೇಶ್ ಗುಂಡೂರಾವ್, ಪತ್ನಿ ಟಬು ರಾವ್ ಹಾಗೂ ಕುಟುಂಬದವರು ಗಣೇಶ ಹೋಮ ಹಾಗೂ ಧನ್ವಂತರಿ ಹೋಮದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
- Advertisement -


