Tuesday, June 9, 2026
Homeಉತ್ತರ ಕನ್ನಡಮದುವೆ ಸಿದ್ಧತೆಗಾಗಿ ಚಿನ್ನ ಖರೀದಿಸಲೆಂದು ಹೋದ ಯುವಕ ನಾಪತ್ತೆ

ಮದುವೆ ಸಿದ್ಧತೆಗಾಗಿ ಚಿನ್ನ ಖರೀದಿಸಲೆಂದು ಹೋದ ಯುವಕ ನಾಪತ್ತೆ

- Advertisement -
- Advertisement -

ಭಟ್ಕಳ; ಮದುವೆ ಸಿದ್ಧತೆಗಾಗಿ ಚಿನ್ನ ಖರೀದಿಸಲೆಂದು ಹೋದ ಯುವಕ ನಾಪತ್ತೆಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ತಾಲೂಕಿನಲ್ಲಿ ನಡೆದಿದೆ. ಕುಮಟಾ ತಾಲೂಕಿನ ಮದ್ಗುಣಿ, ಹಳ್ಳಾರ, ಚಿತ್ರಗಿ ನಿವಾಸಿಯಾಗಿರುವ ಜಾಕೀರ್ ಬೇಗ್ (32) ನಾಪತ್ತೆಯಾಗಿರುವ ಯುವಕ .

ಜಾಕೀರ್ ಮದುವೆಗಾಗಿ ವಿದೇಶದಿಂದ ಊರಿಗೆ ಬಂದಿದ್ದ, ಜಾಕೀರ್ಕ  ಶುಕ್ರವಾರ (ಅಕ್ಟೋಬರ್ 18)ದಂದು ಅಣ್ಣನ ಹೆಂಡತಿ ಮತ್ತು ಅಣ್ಣನ ಮಗಳ ಜತೆ ಚಿನ್ನಾಭರಣ ಖರೀದಿಗೆ ಭಟ್ಕಳಕ್ಕೆ ತೆರಳಿದ್ದರು. ಮಧ್ಯಾಹ್ನ ಸುಮಾರು 1:15ರ ವೇಳೆಗೆ ನೂರಪಳ್ಳಿ ಮಸೀದಿಯಲ್ಲಿ ನಮಾಜ್ ಮುಗಿಸಿ ಹೊರಬಂದ ನಂತರ ಜಾಕೀರ್ ಕಾಣೆಯಾಗಿದ್ದಾರೆ. ಕುಟುಂಬದವರಿಗೂ ಯಾವುದೇ ಮಾಹಿತಿ ನೀಡದೇ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಸುತ್ತಮುತ್ತ ಎಲ್ಲ ಕಡೆ ಕುಟುಂಬಸ್ಥರು ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆ ಜಾಕೀರ್‌ರ ಸಹೋದರ ಗಫೂರ್ ಬೇಗ್ ಅವರು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕುರಿತು ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕಾರ್ಯ ಆರಂಭಿಸಿದ್ದಾರೆ. ಭಟ್ಕಳ ನಗರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ತನಿಖೆಯನ್ನು ಮುಂದುವರಿಸಿದ್ದಾರೆ. ಈ ಘಟನೆಯಿಂದಾಗಿ ಮದುವೆ ಸಂಭ್ರಮದಲ್ಲಿದ್ದ ಕುಟುಂಬದವರಲ್ಲಿ ಆತಂಕ ಮೂಡಿಸಿದ್ದು, ಜಾಕೀರ್‌ರ ಸುರಕ್ಷಿತ ಪತ್ತೆಗಾಗಿ ಭಟ್ಕಳ ನಗರ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!