Wednesday, June 3, 2026
Homeಕರಾವಳಿಮಂಗಳೂರುಕಡಬ: ಕೊಕ್ಕಡ ಜಂಕ್ಷನ್‌ನಲ್ಲಿ ನಿಲ್ಲಿಸಿದ್ದ ಯುವಕನೊಬ್ಬನ ಬೈಕ್ ಕಳ್ಳತನ

ಕಡಬ: ಕೊಕ್ಕಡ ಜಂಕ್ಷನ್‌ನಲ್ಲಿ ನಿಲ್ಲಿಸಿದ್ದ ಯುವಕನೊಬ್ಬನ ಬೈಕ್ ಕಳ್ಳತನ

- Advertisement -
- Advertisement -

ಕಡಬ: ಕೊಕ್ಕಡ ಜಂಕ್ಷನ್‌ನಲ್ಲಿ ನಿಲ್ಲಿಸಿದ್ದ ಯುವಕನೊಬ್ಬನ ಬೈಕ್ ಕಳ್ಳತನವಾಗಿರುವ ಘಟನೆ ನಡೆದಿದೆ. ನ.6ರಂದು ಆಲಂಕಾರು ನಿವಾಸಿ ಶಿವಪ್ರಸಾದ್(30ವ.) ಅವರು ತನ್ನ ಹೀರೋ ಸ್ಪ್ಲೆಂಡರ್ ಪ್ರೋ ದ್ವಿಚಕ್ರ (ಕೆಎ 19, ಇಹೆಚ್ 7942) ವಾಹನವನ್ನು ನ.6ರಂದು ಬೆಳಿಗ್ಗೆ ಬೆಳಿಗ್ಗೆ 8-45 ಗಂಟೆಗೆ ಕೊಕ್ಕಡ ಜಂಕ್ಷನ್ ಬಳಿ ಇರುವ  ಪಂಚಮಿ ಹಿತಾರ್ಯಧಾಮ ಶಿವಗಣೇಶ್ ಮೆಡಿಕಲ್ ಆವರಣದಲ್ಲಿ ನಿಲ್ಲಿಸಿ ಉಜಿರೆಗೆ ಕೆಲಸಕ್ಕೆ ಹೋಗಿದ್ದರು.

ಅದೇ ದಿನ ಸಂಜೆ 6.20 ಗಂಟೆಗೆ ಕೆಲಸ ಮುಗಿಸಿ ವಾಪಾಸು ಬಂದು ನೋಡಿದಾಗ ಬೈಕ್ ನಿಲ್ಲಿಸಿದ ಸ್ಥಳದಲ್ಲಿ ಇಲ್ಲದೇ ಇದ್ದು, ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಬೆಳಿಗ್ಗೆ 8-45 ಗಂಟೆಯಿಂದ ಸಂಜೆ 6-20 ಗಂಟೆಯ ಮದ್ಯದ ಅವಧಿಯಲ್ಲಿ ದ್ವಿ ಚಕ್ರ ವಾಹನವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದಾರೆ.ಕಳವಾದ ದ್ವಿಚಕ್ರ ವಾಹನದ ಮೌಲ್ಯ ರೂ. 20,000 ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಶಿವಪ್ರಸಾದ್ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

- Advertisement -

Latest News

error: Content is protected !!