Friday, June 5, 2026
Homeಕರಾವಳಿಮಂಗಳೂರುಕಡಬ; ಕೊಯಿಲ ಗ್ರಾಮದ ಆತೂರು ಎಂಬಲ್ಲಿ ಶಿಕ್ಷಕರೊಬ್ಬರಿಗೆ ಗೂಡ್ಸ್ ಟೆಂಪೋ ಡಿಕ್ಕಿ: ಗಂಭೀರ ಗಾಯಗೊಂಡು ಸಾವು

ಕಡಬ; ಕೊಯಿಲ ಗ್ರಾಮದ ಆತೂರು ಎಂಬಲ್ಲಿ ಶಿಕ್ಷಕರೊಬ್ಬರಿಗೆ ಗೂಡ್ಸ್ ಟೆಂಪೋ ಡಿಕ್ಕಿ: ಗಂಭೀರ ಗಾಯಗೊಂಡು ಸಾವು

- Advertisement -
- Advertisement -

ಕಡಬ; ಶಿಕ್ಷಕರೊಬ್ಬರಿಗೆ ಗೂಡ್ಸ್ ಟೆಂಪೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಅವರು  ಸಾವನ್ನಪ್ಪಿರುವ ಘಟನೆ ಕೊಯಿಲ ಗ್ರಾಮದ ಆತೂರು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಸುಂಕದಕಟ್ಟೆ ನಿವಾಸಿ ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಅಬ್ದುಲ್ ಖಾದರ್ ಸಖಾಫಿ ಅವರು ಅಪಘಾತಕ್ಕೆ ಬಲಿಯಾದ ದುರ್ದೈವಿ.

ಮೃತ ಅಬ್ದುಲ್ ಖಾದರ್ ಸಖಾಫಿ ಅವರು ಡಿಸೆಂಬರ್ 29 ರಂದು ತನ್ನ ಕುಟುಂಬ ಸದಸ್ಯರೊಂದಿಗೆ ಸಂಬಂಧಿಕರ ಮನೆಯಲ್ಲಿ ನಡೆಯುತ್ತಿದ್ದ ‘ಮದರಂಗಿ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದರು. ಆತೂರು ಜಂಕ್ಷನ್‌ನಲ್ಲಿ ಬಸ್ಸಿನಿಂದ ಇಳಿದ ಅವರು, ತನ್ನ ಕುಟುಂಬದವರನ್ನು ಆಟೋ ರಿಕ್ಷಾದಲ್ಲಿ ಕಾರ್ಯಕ್ರಮದ ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದರು. ನಂತರ ಅವರು ಒಬ್ಬರೇ ನಡೆದುಕೊಂಡು ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳದತ್ತ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಗೂಡ್ಸ್ ಟೆಂಪೋವೊಂದು ಅವರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಅಬ್ದುಲ್ ಖಾದರ್ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.

ಘಟನೆ ನಡೆದ ತಕ್ಷಣ ಸ್ಥಳೀಯರು ಧಾವಿಸಿ ಬಂದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ತಲೆ ಹಾಗೂ ದೇಹದ ಇತರ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಕಡಬ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅತೀ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟೆಂಪೋ ಚಾಲಕನ ವಿರುದ್ಧ ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!