Saturday, June 6, 2026
Homeತಾಜಾ ಸುದ್ದಿಅಶ್ಲೀಲ ಕಮೆಂಟ್ ಮಾಡಿದವರ ವಿರುದ್ಧ ದೂರು ನೀಡಿದ್ರೂ ನಿರ್ಲಕ್ಷ್ಯ ಆರೋಪ; ಪೊಲೀಸರ ತನಿಖೆ ವಿರುದ್ಧ ಸೋಷಿಯಲ್...

ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ಧ ದೂರು ನೀಡಿದ್ರೂ ನಿರ್ಲಕ್ಷ್ಯ ಆರೋಪ; ಪೊಲೀಸರ ತನಿಖೆ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಸಮಾಧಾನ ಹೊರ ಹಾಕಿದ ವಿಜಯಲಕ್ಷ್ಮೀ ದರ್ಶನ್

- Advertisement -
- Advertisement -

ಬೆಂಗಳೂರು; ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ಧ ದೂರು ನೀಡಿದ್ರೂ ಪೊಲೀಸರು ಯಾವುದೇ ತನಿಖೆ ನಡೆಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ವಿಜಯಲಕ್ಷ್ಮೀ ದರ್ಶನ್ ಸಮಾಧಾನ ಹೊರ ಹಾಕಿದ್ದಾರೆ.

ನಾನು ಸಲ್ಲಿಸಿದ ದೂರು ಅನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೇನೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ. ಬೇರೆ ಮಹಿಳೆ ನೀಡಿದ ದೂರಿನ ಬಗ್ಗೆ ಒಂದು ದಿನದೊಳಗೆ ಕ್ರಮ ಕೈಗೊಳ್ಳಲಾಗಿದೆ. ಇದು ನಿಜವಾಗಿಯೂ ನನಗೆ ಆಶ್ಚರ್ಯವನ್ನುಂಟುಮಾಡಿದೆ. ನನ್ನ ದೂರು ಮುಖ್ಯವಲ್ಲವೇ?. ನನ್ನ ವಕೀಲರಿಂದ ನಿರಂತರ ಫಾಲೋ-ಅಪ್‌ಗಳ ನಂತರವೂ ಯಾವುದೇ ಕ್ರಮವಿಲ್ಲ. ಇಂದು ನಾನು ವೈಯಕ್ತಿಕವಾಗಿ ಹೋಗಿ ಅವರಿಗೆ ನೆನಪಿಸಬೇಕಾಯಿತು. ಯಾವುದೇ ಬಾಹ್ಯ ಒತ್ತಡ ಅಥವಾ ಪ್ರಭಾವ ಈ ವಿಳಂಬಕ್ಕೆ ಕಾರಣ ಆಗಿರದಿರಲಿ.

ನಾನು ಇದನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದು ಅನ್ನು ವಿಜಯಲಕ್ಷ್ಮಿ ಮಾಡಿದ್ದಾರೆ. ಈ ಮೂಲಕ ಪೊಲೀಸರ ತನಿಖೆ, ತಮ್ಮ ದೂರು ಅನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬ ಅಸಮಾಧಾನವನ್ನು ನೇರವಾಗಿ ವ್ಯಕ್ತಪಡಿಸಿದ್ದಾರೆ

- Advertisement -

Latest News

error: Content is protected !!