Saturday, June 6, 2026
Homeಕರಾವಳಿಮಂಗಳೂರುಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

- Advertisement -
- Advertisement -

ಬೆಳ್ತಂಗಡಿ : ಉಜಿರೆಯಿಂದ ಸೂರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ತಡೆಗೋಡೆ ಏಕಾಏಕಿ ಕುಸಿದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ – ಸುರ್ಯ ರಸ್ತೆಯಲ್ಲಿ ಜ.31 ರಂದು ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದ ಪರಿಣಾಮ ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿದ್ದು ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!