- Advertisement -
![]()
- Advertisement -
ಬೆಳ್ತಂಗಡಿ: ಉಜಿರೆಯ ಬೆನಕ ಹೆಲ್ತ್ ಸೆಂಟರ್ನ ಸಂಸ್ಥಾಪಕರು ಹಾಗೂ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಡಾ.ಗೋಪಾಲಕೃಷ್ಣ ಕೆ ಅವರಿಗೆ ಸಮಾಜಕ್ಕೆ ಆಯುಷ್ ವೈದ್ಯ ಪದ್ಧತಿಗಳ ಮೂಲಕ ಗ್ರಾಮೀಣ ಭಾಗದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ “ಆಯುಷ್ ಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಸಮರ್ಪಣೆ, ಸೇವಾಭಾವ ಮತ್ತು ಮಾನವೀಯ ವೈದ್ಯಕೀಯ ದೃಷ್ಟಿಕೋನವನ್ನು ಪ್ರಶಂಸಿಸಲಾಯಿತು. ಈ ವೇಳೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಡಾ.ಮೋಹನ್ ಆಳ್ವ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
- Advertisement -


