Saturday, June 6, 2026
Homeಕರಾವಳಿಮಂಗಳೂರುಅಧಿಕಾರ ಹಸ್ತಾಂತರದ ಗೊಂದಲದಿಂದ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ವಿಳಂಬ; ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್...

ಅಧಿಕಾರ ಹಸ್ತಾಂತರದ ಗೊಂದಲದಿಂದ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ವಿಳಂಬ; ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ

- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ವಿಳಂಬ ಆಗುತ್ತಿರುವುದಕ್ಕೆ ರಾಜಕೀಯ ಲೆಕ್ಕಾಚಾರ ಕಾರಣ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್, ಆಡಳಿತ ಪಕ್ಷ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರದ ಹಸ್ತಾಂತರದ ಗೊಂದಲಗಳಿರುವ ಕಾರಣದಿಂದ ವಿಳಂಬವಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ, ಮುಂದಿನ ಮುಖ್ಯಮಂತ್ರಿ ಯಾರು ಎಂದ ಚರ್ಚೆ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರದ ಒಳಗೆ ಇರುವುದರಿಂದ, ಆಯ್ಕೆ ಪ್ರಕ್ರಿಯೆ ನಿಧಾನ ಆಗಿರುವುದರಿಂದ,
ಸಿಎಂ ಸ್ಥಾನ ಬಿಟ್ಟು ಕೊಟ್ಟರೆ ಏನು, ಕೊಡದೇ ಇದ್ದರೆ ಏನು ಎಂಬ ಚಿಂತನೆ ಇರುವುದರಿಂದ ಮತ್ತು ಸರ್ಕಾರ ಎಷ್ಟು ದಿನ ಮುಂದೆ ಹೋಗುತ್ತದೆ ಎಂಬ ಭಯವೂ ಇರುವುದರಿಂದ ಚುನಾವಣೆಗಳು ಮುಂದಕ್ಕೆ ಹೋಗುತ್ತಿವೆ ಎಂದು ನಳೀನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.

- Advertisement -

Latest News

error: Content is protected !!