- Advertisement -


- Advertisement -
ಪುತ್ತೂರು ಪೇಟೆಯಲ್ಲಿ ಮುಳ್ಳುಹಂದಿ ಪ್ರತ್ಯಕ್ಷವಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಿಸಿದ ಘಟನೆ ನಡೆದಿದೆ.
ಪುತ್ತೂರು ಬ್ಲಡ್ ಬ್ಯಾಂಕ್ ಬಳಿ ಮುಳ್ಳುಹಂದಿ ಕಾಣಿಸಿಕೊಂಡಿದ್ದು, ಯಾವುದೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮುಳ್ಳು ಹಂದಿ ಗಾಯಗೊಂಡಿತ್ತು ಎನ್ನಲಾಗಿದೆ. ಇನ್ನು ಮುಳ್ಳುಹಂದಿ ಪ್ರತ್ಯಕ್ಷವಾಗಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳಕ್ಕೆ ಸ್ನೇಕ್ ತೇಜಸ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಮುಳ್ಳುಹಂದಿಯ ರಕ್ಷಣೆ ಮಾಡಿದ್ದಾರೆ. ಉಪ ವಲಯ ಅರಣ್ಯಾಧಿಕಾರಿ ಉಲ್ಲಾಸ್ ಅವರು ರಕ್ಷಣಾ ಕಾರ್ಯದ ನೇತೃತ್ವ ವಹಿಸಿದ್ದರು.
- Advertisement -


