- Advertisement -
![]()
- Advertisement -
ಉಪ್ಪಿನಂಗಡಿ: ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿರುವ ಘಟನೆ ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ನಡೆದಿದೆ. ಹೇಮಚಂದ್ರ (32) ಮೃತ ದುರ್ದೈವಿ. ಘಟನೆಯಲ್ಲಿ ಉಮ್ಮರಬ್ಬ (51) ಎಂಬವರು ಗಾಯಗೊಂಡವರು.
ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಾಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್ಭಾಗದ ರಸ್ತೆ ಯಿಂದ ವಾಹನ ಕೆಳಭಾಗದ ರಸ್ತೆಗೆ ಪಲ್ಟಿಯಾಗಿದೆ. ಮೃತ ಹೇಮಚಂದ್ರ ಅವಿವಾಹಿತನಾಗಿದ್ದು, ಇವರೇ ಮನೆಗೆ ಆಧಾರ ಸ್ತಂಭವಾಗಿದ್ದರು. ಘಟನೆಯ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


