- Advertisement -
![]()
- Advertisement -
ಮಂಗಳೂರು; 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆ ನಾಟೇಕಲ್ ನಿವಾಸಿ ರಿಯಾಜ್ ಬಂಧಿತ ಆರೋಪಿ.
ಕಾಪಿರೈಟ್ ಕಾಯ್ದೆ ಪ್ರಕರಣದಲ್ಲಿ ಆರೋಪಿ ನ್ಯಾಯಾಲಯಕ್ಕೆ ಹಾಜರಾಗುದೇ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು 2016 ರಲ್ಲಿ ಈ ಪ್ರಕರಣವನ್ನು ಎಲ್ ಪಿ ಸಿ 79/2016 ಪ್ರಕರಣವಾಗಿ ಪರಿವರ್ತಿಸಿತ್ತು. ಈ ಪ್ರಕರಣದಲ್ಲಿ ಸುಮಾರು 17 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿತ ರಿಯಾಜ್ ನನ್ನು ದಿನಾಂಕ 24-03-2026 ರಂದು ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
- Advertisement -


