Friday, June 5, 2026
Homeಕರಾವಳಿಮಂಗಳೂರುವಿಟ್ಲ: ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪ‌ರ್ ನಡುವೆ ಅಪಘಾತ; ದೂರು ಪ್ರತಿದೂರು ದಾಖಲು

ವಿಟ್ಲ: ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪ‌ರ್ ನಡುವೆ ಅಪಘಾತ; ದೂರು ಪ್ರತಿದೂರು ದಾಖಲು

- Advertisement -
- Advertisement -

ವಿಟ್ಲ: ಕೆಎಸ್‌ಆರ್ಟಿಸಿ ಬಸ್ ಮತ್ತು ಟಿಪ್ಪ‌ರ್ ನಡುವೆ ಅಪಘಾತ ಸಂಭವಿಸಿ ದೂರು ಪ್ರತಿದೂರು ದಾಖಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ಪಕಳಕುಂಜದಿಂದ ವಿಟ್ಲಕ್ಕೆ ಬರುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಮತ್ತು ಪೆರುವಾಯಿ ಕಡೆ ಹೋಗುತ್ತಿದ್ದ ಟಿಪ್ಪರ್  ಮಧ್ಯೆ ಕುದ್ದುಪದವು ಪೆರುವಾಯಿ ರಸ್ತೆಯ ಮುಳಿಯ ದಂಬೆ ಅಂಗನವಾಡಿ ಕೇಂದ್ರದ ಬಳಿ ಅಪಘಾತ ನಡೆದಿದೆ. ಈ ವೇಳೆ ಎರಡು ಕಡೆಯವರ ಮಧ್ಯೆ ಮಾತಿನ ಚಕಮಕಿ ನಡೆದು, ದೂರು ಪ್ರತಿದೂರು ದಾಖಲಾಗಿದೆ.

ಇಳಿಜಾರು ಪ್ರದೇಶ ಹಾಗೂ ತಿರುವಿನಲ್ಲಿ ಎರಡು ವಾಹನಗಳು ಒಟ್ಟಿಗೆ ಮುನ್ನುಗಿದ ಕಾರಣ ಅಪಘಾತವಾಗಿದೆ ಎಂದು ತಿಳಿದು ಬಂದಿದೆ. ಘಟನೆಯ ಬಳಿಕ ಬಸ್ ಚಾಲಕ ಮತ್ತು ಟಿಪ್ಪರ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದ್ದು, ಆ ಬಳಿಕ ಟಿಪ್ಪರ್ ಚಾಲಕ, ಬಸ್ ಚಾಲಕ ಮತ್ತು ನಿರ್ವಾಹಕರ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ.ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ನೀಡಿದ್ದಾರೆ .

- Advertisement -

Latest News

error: Content is protected !!