Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ : ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

- Advertisement -
- Advertisement -

ಬೆಳ್ತಂಗಡಿ : ನೇತ್ರಾವತಿ ಸ್ನಾನಘಟ್ಟದ ಬಳಿ ಏ.11 ರಂದು ಸಂಜೆ ವ್ಯಕ್ತಿಯೊಬ್ಬರು ತಾನು ತಂದಿದ್ದ ಪೆಟ್ರೋಲ್ ಕ್ಯಾನ್ ನಿಂದ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳೀಯರು ರಕ್ಷಣೆಗೆ ಆಗಮಿಸಿ ಬೆಂಕಿಯನ್ನು ನಂದಿಸಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಧರ್ಮಸ್ಥಳ ಪೊಲೀಸರು ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಆಗಮಿಸಿ ಬೆಂಕಿ ಹಚ್ಚಿಕೊಂಡ ವ್ಯಕ್ತಿಯನ್ನು ವಿಚಾರಿಸಿದಾಗ ತಾನು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಚ್ಚಿಗಟ್ಟ ಗ್ರಾಮದ ನಿವಾಸಿ ನರೇಂದ್ರ(50) ಎಂಬುವುದಾಗಿ ತಿಳಿಸಿದ್ದು. ನಾನು ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳದ ನೇತ್ರಾವತಿ ಬಳಿಗೆ ಆಗಮಿಸಿ ಪೆಟ್ರೋಲ್ ತಾನೆ ತಂದು ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿಸಿದ್ದಾನೆ.

ಈ ಘಟನಾ ವಿಚಾರವನ್ನು ಧರ್ಮಸ್ಥಳ ಪೊಲೀಸರು ನರೇಂದ್ರ ಮನೆಯವರು ಮಾಹಿತಿ ನೀಡಿದ್ದು ಅವರು ಬಂದ ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಬೇಕಾಗಿದೆ.

- Advertisement -

Latest News

error: Content is protected !!