Thursday, June 4, 2026
Homeತಾಜಾ ಸುದ್ದಿಯಾದಗಿರಿ; : ಕಾರು ಮತ್ತು ಖಾಸಗಿ ಬಸ್​​ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ 6 ಜನ...

ಯಾದಗಿರಿ; : ಕಾರು ಮತ್ತು ಖಾಸಗಿ ಬಸ್​​ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ 6 ಜನ ಸಜೀವ ದಹನ

- Advertisement -
- Advertisement -

ಯಾದಗಿರಿ; : ಕಾರು ಮತ್ತು ಖಾಸಗಿ ಬಸ್​​ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ 6 ಜನ ಸಜೀವ ದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ.  ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಂದು ಅಮವಾಸ್ಯೆ ಹಿನ್ನೆಲೆ ವೇಣುಗೋಪಾಲ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಜವರಾಯನ ಅಟ್ಟಹಾಸಕ್ಕೆ ಕಾರಲ್ಲಿದ್ದ ಕೌನ್ಸಿಲರ್​​ ಕೃಷ್ಣನಾಯಕ್ (50), ಕೃಷ್ಣನಾಯಕ್ ಹೆಂಡತಿ ಅನಂತ್​​ ಕಲಾ (45), ಶರಣಪ್ಪ (36), ಶರಣಪ್ಪ ಹೆಂಡತಿ ನಿಸರ್ಗ (30), ಶರಣಪ್ಪ ಮಗು ಸಿದ್ದಾರ್ಥ್​ (3) ಮತ್ತು ಶಶಿಕಲಾ (30) ಮೃತರು.

ಭೀಕರ ಅಪಘಾತದಲ್ಲಿ ಬಸ್​​ ಮತ್ತು ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದರೂ ಪವಾಡ ಎಂಬಂತೆ 5 ವರ್ಷದ ಅಥ್ವಿಕ ಮತ್ತು ಒಂದು ವರ್ಷದ ಮಗು ಶ್ರೀನಿಧಿ ಬದುಕುಳಿದ್ದಾರೆ. ದೇವರ ದರ್ಶನ ಮುಗಿಸಿಕೊಂಡು ವಾಪಸ್ ಹೋಗುವಾಗ ಘಟನೆ ನಡೆದಿದ್ದು, ಕಾರು ಓವರ್​​ಟೇಕ್​​ ಮಾಡಲು ಹೋದಾಗ ಅಪಘಾತ ಸಂಭವಿಸಿದೆ. ಕಾರು ಬಸ್​​ಗೆ ಗುದ್ದಿದ ಬಳಿಕ ಸುಮಾರು 50 ಮೀಟರ್​​ ದೂರ ಬಸ್​​ ಕಾರನ್ನು ಎಳೆದುಕೊಂಡು ಹೋಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!