ಮೂಡಬಿದರೆ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹಂಡೇಲಿನ ಮಹಮ್ಮದ್ ಆರೀಪ್ ಮತ್ತು ಆತನ ಸಹಚರ ಗಂಟಾಲಕಟ್ಟೆಯ ಇಮ್ರಾನ್ @ ಇಬ್ರಾಹಿಂ ಬಂಧಿತರು.
ದಿನಾಂಕ 14/05/2026ರಂದು ಬೆಳ್ಳಿಗ್ಗೆ 07.00ಗಂಟೆಗೆ PSI ಕೃಷ್ಣಪ್ಪ ಮತ್ತು ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬೆಳಿಗ್ಗೆ 07.00ಗಂಟೆ ಸಮಯಕ್ಕೆ ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಹೋಗುತ್ತಿದ್ದಾರೆ ಎಂಬುದಾಗಿ ಬಂದ ಮಾಹಿತಿಯಂತೆ ಸಿಬ್ಬಂದಿಗ ಮೂಡಬಿದ್ರೆ ತಾಲೂಕು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ತಲುಪಿ ವಾಹನ ತಪಾಸಣೆ ಮಾಡುತ್ತಿರುವ ಸಮಯ ಸುಮಾರು 07.30ಗಂಟೆಗೆ ಬೆಳುವಾಯಿ ಕಡೆಯಿಂದ ಬೂದು KA19MK4265ನೇ ಬಣ್ಣದ ಮಾರುತಿ ಬ್ರೀಜಾ ಕಾರು ಬಂದಿದ್ದು, ನಿಲ್ಲಿಸಲು ಸೂಚನೇ ನೀಡಿದಾಗ ನಿಲ್ಲಿಸದೇ ಮುಂದಕ್ಕೆ ಚಲಾಯಿಸಿಕೊಂಡು ಹೋಗಿರುತ್ತಾರೆ. ನಂತರ ಆ ವಾಹನವನ್ನು ಬೆನ್ನಟ್ಟಿದಾಗ ಸ್ವಲ್ಪ ಮುಂದಕ್ಕೆ ಗುಂಡುಕಲ್ಲು 5ಸೈಂಟ್ಸ್ ರಸ್ತೆಗೆ ತಿರುಗಿ ಸಾಹುಲ್ ಹಮೀದ್ ಎಂಬುವರ ಮನೆ ಕಂಪೌಂಡ್ ಒಳಭಾಗದಲ್ಲಿ ಬ್ರೀಜಾ ಕಾರನ್ನು ನಿಲ್ಲಿಸಿ ವಾಹನದಲ್ಲಿದ್ದ ಚಾಲಕ ಮೂಡಬಿದ್ರೆ ಠಾಣಾ ಎಂ.ಓ.ಬಿ ಆಗಿರುವ ಹಂಡೇಲಿನ ಮಹಮ್ಮದ್ ಆರೀಪ್ ಮತ್ತು ಆತನ ಸಹಚರ ಗಂಟಾಲಕಟ್ಟೆಯ ಇಮ್ರಾನ್ @ ಇಬ್ರಾಹಿಂ ಕಾರಿನಿಂದ ಇಳಿದು ಓಡಿಹೋಗುತ್ತಿದ್ದವರನ್ನು ಸಿಬ್ಬಂದಿ ಬೆನ್ನಟ್ಟಿ ಹಿಡಿದು ವಿಚಾರಿಸಿ ನಂತರ ಮಾರುತಿ ಬ್ರೀಜಾ ಕಾರನ್ನು ಪರಿಶೀಲಿಸಿದಾಗ ಕಾರಿನ ಹಿಂಬದಿ ಸೀಟ್ ನ್ನು ತೆಗೆದು ಅದರ ಮೇಲೆ ನೀಲಿ ಬಣ್ಣದ ಪ್ಲಾಸ್ಟಿಕ್ ನ್ನು ಹಾಕಿ ಅದರ ಮೇಲೆ 1ಗಂಡು ಕರುವನ್ನು ಹಿಂಸಾತ್ಮಕವಾಗಿ ಕಾಲು ಮತ್ತು ತಲೆಯನ್ನು ಹಗ್ಗದಿಂದ ಕಟ್ಟಿ ತುಂಬಿಸಿರುವುದು ಕಂಡು ಬಂದಿರುತ್ತದೆ. ಆರೋಪಿಗಳು ಒಂದು ವಾರದಿಂದ ಬೇರೆ ಬೇರೆ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿಕೊಂಡು ಬಂದು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ನಿವಾಸಿ ಸಾಹುಲ್ ಹಮೀದ್ ರವರ ಮನೆಯ ಬಳಿ ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ ಅಥವಾ ದನಗಳನ್ನು ಕಡಿಯಲೆಂದು ಇತರರಿಗೆ ಮಾರಾಟ ಮಾಡುವ ಸಲುವಾಗಿ ಸಂಗ್ರಹಣೆ ಮಾಡಿರುವುದಾಗಿ ತಿಳಿಸಿರುತ್ತಾರೆ. ಆರೋಪಿಗಳು ದನವನ್ನು ಕಳ್ಳತನ ಮಾಡಿಕೊಂಡು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದರಿಂದ ದನವನ್ನು, KA19MK4265ನೇ ಮಾರುತಿ ಬ್ರೀಜಾ ಕಾರನ್ನು ಮತ್ತು ಆರೋಪಿಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ.


