Saturday, June 6, 2026
Homeಕರಾವಳಿಕಾಸರಗೋಡುಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ: ಯುವಕ ಸಾವು

ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ: ಯುವಕ ಸಾವು

- Advertisement -
- Advertisement -

ಕುಂಬಳೆ; ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಯುವಕ ಸಾವನ್ನಪ್ಪಿರುವ ಘಟನೆ ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆ ಪೆರಿಯಡ್ಕದಲ್ಲಿ ನಡೆದಿದೆ. ಬಾಯಾರು ಚಿಪ್ಪಾರು ನೆತ್ತರಗುಳಿ ನಿವಾಸಿ ಎನ್. ಕಿಶನ್ (25) ಮೃತ ದುರ್ದೈವಿ,

ಇವರೊಂದಿಗಿದ್ದ ಸಹ ಸವಾರ, ಮೃತರ ತಂದೆ ಮಾಧವ ದೇವಾಡಿಗ (55) ಎಂಬವರು ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.

ಕಿಶನ್ ಚಲಾಯಿಸುತ್ತಿದ್ದ ಸ್ಕೂಟರ್ ಮತ್ತು ಮುಂಭಾಗದಿಂದ ಬಂದ ಬೈಕ್ ಪರಸ್ಪರ ಡಿಕ್ಕಿ ಹೊಡೆದು ಅಪಘಾತ ನಡೆದಿದೆ.

- Advertisement -

Latest News

error: Content is protected !!