- Advertisement -
![]()
- Advertisement -
ಉಡುಪಿ: ಇಲ್ಲಿನ ಶಿರ್ವ ಠಾಣಾ ವ್ಯಾಪ್ತಿಯ ಕಲ್ಲಟ್ಟು ಎಂಬಲ್ಲಿನ ನದಿ ತೀರದಲ್ಲಿ ಹಸುವಿನ ರುಂಡ ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಪನಾಶಿನಿ ಎಂದೇ ಪ್ರಸಿದ್ಧಿಯಾಗಿರುವ ಈ ನದಿಯು ಶಿರ್ವ ವಿಷ್ಣುಮೂರ್ತಿ ದೇವಸ್ಥಾನ ಸೇರಿದಂತೆ, ಹಲವು ದೇಗುಲಗಳ ಜಳಕ ನಡೆಯುವ ಸ್ಥಳ. ದುಷ್ಕರ್ಮಿಗಳು ನಿರ್ಜನ ಪ್ರದೇಶ ಗಮನಿಸಿಕೊಂಡು ಹಸುವಿನ ತ್ಯಾಜ್ಯ ಎಸೆದಿರುದ್ದು, ಪೊಲೀಸರು ಹಾಗೂ ಪಶುಸಂಗೋಪನ ಇಲಾಖೆ ಅಧಿಕಾರಿಗಳ ಸಮಕ್ಷಮದಲ್ಲಿ ಮಹಜರು ಮಾಡಲಾಗುತ್ತಿದೆ.
ಇನ್ನು ದುಷ್ಕರ್ಮಿಗಳ ಪತ್ತೆ ಮಾಡಲು ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವ ಹಿಂದೂ ಪರಿಷತ್ ನ ಪ್ರಮುಖರು ಒತ್ತಾಯ ಮಾಡಿದ್ದಾರೆ. ಸ್ಥಳದಲ್ಲಿ ಜಮಾಯಿಸಿ, ತನಿಕೆಗೆ ಒತ್ತಾಯಿಸಿದ್ದಾರೆ.
- Advertisement -


