- Advertisement -
![]()
- Advertisement -
ಬೆಳ್ತಂಗಡಿ : ಸವಣಾಲು ಕಟ್ಟದಬೈಲು ನಿವಾಸಿ, ಪ್ರಗತಿಪರ ಕೃಷಿಕ ವಸಂತ ಪೂಜಾರಿ (75) ಇವರು ಅಲ್ಪ ಕಾಲದ ಅಸೌಖ್ಯದಿಂದ ಮೇ 30ರಂದು ಸ್ವಗೃಹದಲ್ಲಿ ನಿಧನರಾದರು.
ಪ್ರಗತಿಪರ ಕೃಷಿಕರಾಗಿದ್ದ ಇವರು, ಊರಿನ ಅನೇಕ ಸಂಘ ಸಂಸ್ಥೆಯಲ್ಲಿ ಪದಾಧಿಕಾರಿಯಾಗಿ ಮತ್ತು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರೋತ್ಸಾಹಿಸುತ್ತಿದ್ದರು. ಕೊಡುಗೈ ದಾನಿ ಹಾಗೂ ಶಾಂತ ಸರಳ ಸಜ್ಜನ ವ್ಯಕ್ತಿಯಾಗಿದ್ದರು.
ಮೃತರು ಪತ್ನಿ , ಇಬ್ಬರು ಪುತ್ರರು ,ಓರ್ವ ಪುತ್ರಿ ಸೇರಿದಂತೆ ಅಪಾರ ಪ್ರಮಾಣದ ಬಂಧು ಬಳಗವನ್ನು ಅಗಲಿದ್ದಾರೆ.
- Advertisement -


