Saturday, June 6, 2026
Homeಕರಾವಳಿಮಂಗಳೂರುಸುಳ್ಯ; 40 ಅಡಿ ಆಳದ ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕದಳದ ಸಿಬ್ಬಂದಿ

ಸುಳ್ಯ; 40 ಅಡಿ ಆಳದ ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕದಳದ ಸಿಬ್ಬಂದಿ

- Advertisement -
- Advertisement -

ಸುಳ್ಯ; 40 ಅಡಿ ಆಳದ ಬಾವಿಗೆ ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಿಸಿದ ಘಟನೆ ದುಗಲಡ್ಕ ಸಮೀಪದ ಕಂದಡ್ಕದಲ್ಲಿ ಜೂನ್ 4ರ ಗುರುವಾರ ನಡೆದಿದೆ.  


ಸುಳ್ಯ ತಾಲೂಕಿನ ಕಸಬ ಗ್ರಾಮದ ಕಂದಡ್ಕದಲ್ಲಿ ನವೀನ್ ಕುಮಾರ್ ಎಂಬವರು ತಮ್ಮ ಮನೆಯ ಸುಮಾರು ನಲವತ್ತು ಅಡಿ ಆಳದ ಬಾವಿಯನ್ನು ಸ್ವಚ್ಛಗೊಳಿಸುವ ಸಲುವಾಗಿ ಬಾವಿಯೊಳಗೆ ಇಳಿದಿದ್ದರು. ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಬಾವಿಯೊಳಗಿನ ಆಮ್ಲಜನಕದ ಪ್ರಮಾಣ ಕಡಿಮೆಯಾಗಿದ್ದು, ಉಸಿರಾಟದ ತೊಂದರೆಯಿಂದ ಅವರು ಪ್ರಜ್ಞೆ ತಪ್ಪಿ ಬಾವಿಯಲ್ಲೇ ಕುಸಿದು ಬಿದ್ದಿದ್ದರು.

ಘಟನೆಯ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತುರ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಬಾವಿಯೊಳಗೆ ಇಳಿದ ಸಿಬ್ಬಂದಿ ನಾಗರಾಜ್ ಪೂಜಾರಿ ಅವರು ಆಮ್ಲಜನಕದ ಕೊರತೆ ಇರುವುದನ್ನು ಅರಿತು ತಕ್ಷಣವೇ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡರು. ಬಳಿಕ ಆಮ್ಲಜನಕ ಕಿಟ್ ಧರಿಸಿ ಮತ್ತೆ ಬಾವಿಗೆ ಇಳಿದು ಪ್ರಾಣಾಪಾಯದ ಸ್ಥಿತಿಯಲ್ಲಿದ್ದ ನವೀನ್ ಕುಮಾರ್ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತುವಲ್ಲಿ ಯಶಸ್ವಿಯಾದರು. ರಕ್ಷಿಸಲ್ಪಟ್ಟ ನವೀನ್ ಕುಮಾರ್ ಅವರಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು.

ಅಗ್ನಿಶಾಮಕ ಠಾಣಾಧಿಕಾರಿ ಕಿರಣ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬಂದಿಗಳಾದ ನಾಗರಾಜ, ಮಹಮ್ಮದ್ ರಫಿಕ್, ಹರ್ಷವರ್ಧನ್, ಮೋಹನ್ ಬಾಬು, ಹರೀಶ್ ಗೌಡ, ಆನಂದ್ ಹಾಗೂ ರಾಜೇಶ್ ಎಸ್.ಕೆ. ಪಾಲ್ಗೊಂಡಿದ್ದರು.

- Advertisement -

Latest News

error: Content is protected !!