Tuesday, August 4, 2026
Homeಕರಾವಳಿಉಡುಪಿನಾಳೆಯಿಂದಲೇ ಜಿಲ್ಲಾ ಪ್ರವಾಸ ನಡೆಸಲು ಸಚಿವರಿಗೆ ಸಿಎಂ ಸೂಚನೆ

ನಾಳೆಯಿಂದಲೇ ಜಿಲ್ಲಾ ಪ್ರವಾಸ ನಡೆಸಲು ಸಚಿವರಿಗೆ ಸಿಎಂ ಸೂಚನೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಹಿನ್ನೆಲೆಯಲ್ಲಿ ಸಚಿವರು ಕೂಡಲೇ ಜಿಲ್ಲಾ ಒ್ರವಾಸ ಪ್ರವಾಸ ಕೈಗೊಳ್ಳುವಂತೆ ಸಚಿವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ದೇಶನ ನೀಡಿದ್ದಾರೆ.

ಎಲ್ಲಾ ಸಚಿವರಿಗೂ ತಲಾ ಒಂದೊಂದು ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದ್ದು, ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.

ಸಚಿವ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಕೊಡಗು ಜಿಲ್ಲೆಯಲ್ಲಿ ಮತ್ತು ಸಚಿವ ಲಕ್ಷ್ಮಣ ಸವದಿ ಅವರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡುವಂತೆ ಸೂಚನೆ ನೀಡಲಾಗಿದೆ.

ಅಲ್ಲದೇ, ಎಲ್ಲಾ ಸಚಿವರು ಪ್ರವಾಸ ನಡೆಸಿ ಕಂದಾಯ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

- Advertisement -

Latest News

error: Content is protected !!