- Advertisement -


- Advertisement -
ಮಂಗಳೂರಿನಿಂದ ಶಿವಮೊಗ್ಗಕ್ಕೆ ಚಲಿಸುತ್ತಿದ್ದ ಕಾರೊಂದು ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಕೆರೆಗೆ ಬಿದ್ದ ಘಟನೆ ತೀರ್ಥಹಳ್ಳಿ ತಾಲೂಕಿನ ಬಾಳಗಾರು ಸಮೀಪ ಗುರುವಾರ ನಡೆದಿದೆ.
ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ತಕ್ಷಣವೇ ಈಜಿಕೊಂಡು ದಡ ಸೇರಿದ್ದರಿಂದ ಅನಾಹುತ ತಪ್ಪಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮಾಳೂರು ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -


