Thursday, June 4, 2026
Homeಕರಾವಳಿಉಡುಪಿಕರಾವಳಿಯ 2 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳು ಸೇರಿ ರಾಜ್ಯದ 5 ಪಿಎಸ್ಐಗಳ ವರ್ಗಾವಣೆ

ಕರಾವಳಿಯ 2 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳು ಸೇರಿ ರಾಜ್ಯದ 5 ಪಿಎಸ್ಐಗಳ ವರ್ಗಾವಣೆ

- Advertisement -
- Advertisement -

ಮಂಗಳೂರು: ಕರಾವಳಿಯ 5 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.

ವರ್ಗಾವಣೆಯಾಗಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳು.

  1. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಮ ನಾಯ್ಕ್ ಜಿ. ಯವರನ್ನು ಪುತ್ತೂರು ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಪುತ್ತೂರಿನಲ್ಲಿ ಚೆಲುವಯ್ಯ ಅವರು ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
  2. ಉಡುಪಿ ನಗರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸದಾಶಿವ ರಾಮಪ್ಪ ಗವರೋಜರನ್ನು ಕುಂದಾಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
  3. ಕುಂದಾಪುರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹರೀಶ್ ಆರ್ ರನ್ನು ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
  4. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೌನೇಶ್ ರನ್ನು ಚಿಕ್ಕಮಗಳೂರು ನಗರ ಠಾಣೆ (ಅಪರಾಧ ವಿಭಾಗ) ಕ್ಕೆ ವರ್ಗಾವಣೆ ಮಾಡಲಾಗಿದೆ.
  5. ಉತ್ತರ ಕನ್ನಡ ಜಿಲ್ಲೆಯ ಡಿ.ಎಸ್.ಬಿ ತಟ್ಟಿಹಳ್ಳಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಯಶ್ರೀ ಶಾನಭಾಗರನ್ನು ಶಿರಸಿ ಹೊಸಮಾರುಕಟ್ಟೆ ಠಾಣೆ (ಅಪರಾಧ ವಿಭಾಗ) ಕ್ಕೆ ವರ್ಗಾವಣೆ ಮಾಡಲಾಗಿದೆ.

- Advertisement -

Latest News

error: Content is protected !!