Saturday, June 28, 2025
Homeಕರಾವಳಿಉಪ್ಪಿನಂಗಡಿ: ಕಾರು ಮತ್ತು ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕಾರು ಮತ್ತು ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ

spot_img
- Advertisement -
- Advertisement -

ಉಪ್ಪಿನಂಗಡಿ: ಬೈಕೊಂದು ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಹಿರೇಬಂಡಾಡಿ ಗ್ರಾಮದ ಮುರದಮೇಲು ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡವರನ್ನು ಕಡಬ ಗ್ರಾಮದ ಪಾಲೋಳಿಯ ಜನಾರ್ಧನ್ ಗೌಡ ಗಂಭೀರ ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸಿದ ಕೂಡಲೇ ಜತೆಯಲ್ಲಿದ್ದ ಕಾರು ಚಾಲಕನ ಸಂಬಂಧಿ ಪುತ್ತೂರು ಆಸ್ಪತ್ರೆ ಗೆ ದಾಖಲಿಸಿ ಮಾನವೀಯತೆ ಮರೆದಿದ್ದಾರೆ.

ಈತ ನಿನ್ನೆಯಷ್ಟೇ ಅಕ್ರಮ ಪಿಸ್ತೂಲ್ ಕೇಸ್ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಘಟನಾ ಸ್ಥಳಕ್ಕೆ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!