- Advertisement -
- Advertisement -
ನವದೆಹಲಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಾಮಾಜಿಕ ಕಾರ್ಯಕರ್ತ ಮತ್ತು ಆರ್ಯ ಸಮಾಜದ ನೇತಾರ ಸ್ವಾಮಿ ಅಗ್ನಿವೇಶ್ (80)ಇಂದು ಚಿಕಿತ್ಸೆ ಫಲಕಾರಿಯಾಗದೆ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಬಿಲಿಯರಿ ಸೈನ್ಸಸ್ ನಲ್ಲಿ ಕೊನೆಯುಸಿರೆಳೆದರು.
ಹರ್ಯಾಣದಲ್ಲಿ ಒಂದು ಕಾಲದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಸ್ವಾಮಿ ಅಗ್ನಿವೇಶ್ ಅವರು ರಾಜಕೀಯ ತೊರೆದು ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಭ್ರಷ್ಟಾಚಾರ ವಿರುದ್ಧದ ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು.
- Advertisement -