Monday, June 8, 2026
Homeಕರಾವಳಿಉಡುಪಿಉಗ್ರರ ಪುಂಡಾಟಕ್ಕೆ ಸೇನೆಯಿಂದ ತಕ್ಕಉತ್ತರ: ಮೂವರು ಉಗ್ರರ ಎನ್'ಕೌಂಟರ್

ಉಗ್ರರ ಪುಂಡಾಟಕ್ಕೆ ಸೇನೆಯಿಂದ ತಕ್ಕಉತ್ತರ: ಮೂವರು ಉಗ್ರರ ಎನ್’ಕೌಂಟರ್

- Advertisement -
- Advertisement -

ಶ್ರೀನಗರ: ಭಾರತೀಯ ಸೇನಾಪಡೆ ಶ್ರೀನಗರದಲ್ಲಿ ಇಂದು ಮುಂಜಾನೆ ನಡೆಸಿದ ಕಾರ್ಯಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದ ಶ್ರೀನಗರ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಓಡಾಟದ್ಲಲಿ ತೊಡಗಿದ್ದರು.ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಇಂದು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿತ್ತು.

ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಸುಳಿವು ನೀಡದೆ ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳವನ್ನು ಸುತ್ತುವರೆದ ಸೇನಾಪಡೆಗಳು ಕೂಡಲೇ ಕಾರ್ಯಾಚರಣೆಯನ್ನು ಎನ್’ಕೌಂಟರ್ ಆಗಿ ಮಾರ್ಪಡಿಸಿ ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡುವ ಮೂಲಕ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!