Friday, June 5, 2026
Homeತಾಜಾ ಸುದ್ದಿ'ಹೆತ್ತವರು ಹೆಣ್ಣು ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ- ಮೌಲ್ಯಗಳನ್ನು ಕಲಿಸಬೇಕಿದೆ'-ಶಾಸಕ ಸುರೇಂದ್ರ ಸಿಂಗ್​ ವಿವಾದಾತ್ಮಕ ಹೇಳಿಕೆ

‘ಹೆತ್ತವರು ಹೆಣ್ಣು ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ- ಮೌಲ್ಯಗಳನ್ನು ಕಲಿಸಬೇಕಿದೆ’-ಶಾಸಕ ಸುರೇಂದ್ರ ಸಿಂಗ್​ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಬಲಿಯಾ: ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದಿರುವ ಗ್ಯಾಂಗ್​ರೇಪ್​ ಪ್ರಕರಣದ ಕುರಿತು ದೇಶಾದ್ಯಂತ ಆಕ್ರೋಶ ಮುಗಿಲುಮುಟ್ಟಿದೆ.ಇದರ ಬೆನ್ನಲ್ಲೇ ಬಿಜೆಪಿ ಶಾಸಕ ನೀಡಿರುವ ಹೇಳಿಕೆಯೊಂದು ವಿವಾದವನ್ನು ಹುಟ್ಟುಹಾಕಿದೆ.

ಬಲಿಯಾ ಕ್ಷೇತ್ರದ ಶಾಸಕ ಸುರೇಂದ್ರ ಸಿಂಗ್​ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ “ನಾನು ಶಾಸಕನಾಗಿರುವುದರ ಜತೆಗೆ ಓರ್ವ ಶಿಕ್ಷಕನು ಹೌದು. ಉತ್ತಮ ಆಡಳಿತವಾಗಲಿ ಅಥವಾ ತಲ್ವಾರ್​ನಿಂದಾಗಲಿ ರೇಪ್​ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ. ಬದಲಾಗಿ ಉತ್ತಮ ಸಂಸ್ಕಾರದಿಂದ ಮಾತ್ರ ಇಂತಹ ಪ್ರಕರಣಗಳನ್ನು ನಿಲ್ಲಿಸಬಹುದು. ಹೀಗಾಹಿ ಎಲ್ಲ ತಂದೆ-ತಾಯಂದಿರು ತಮ್ಮ ಹೆಣ್ಣು ಮಕ್ಕಳಿಗೆ ಒಳ್ಳೆಯ ಸಂಸ್ಕೃತಿಯನ್ನು ಕಲಿಸಿ ಉತ್ತಮ ಮೌಲ್ಯಗಳನ್ನು ಬೆಳೆಸಿ” ಎಂದು ಹೇಳಿದ್ದಾರೆ.

ವಿವಾದಾತ್ಮಕ ಹೇಳಿಕೆಗಳಿಂದಲೇ ಪ್ರಸಿದ್ಧಿ ಪಡೆದ ಶಾಸಕ ಸುರೇಂದ್ರ ಸಿಂಗ್​ ಕಳೆದ ವರ್ಷ ಗಾಂಧೀಜಿ ಕೊಂದ ನಾಥೂರಾಮ್​ ಗೂಡ್ಸೆ ಉಗ್ರನಲ್ಲ ಎಂದು ವಿವಾದ ಸೃಷ್ಟಿಸಿದ್ದರು. ಹೀಗೆ ಸಾಕಷ್ಟು ಬಾರಿ ತಮ್ಮ ಹೇಳಿಕೆಗಳಿಂದ ಸುರೇಂದ್ರ ಸಿಂಗ್​ ಜನರ ಆಕ್ರೋಶಕ್ಕೂ ಗುರಿಯಾಗಿದ್ದಾರೆ.

- Advertisement -

Latest News

error: Content is protected !!