Friday, June 5, 2026
Homeತಾಜಾ ಸುದ್ದಿನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಅಣ್ಣ,ಸಿಬಿಐ ಅಧಿಕಾರಿಗಳಿಗೆ ಧನ್ಯವಾದ ಎನ್ನುವ ತಮ್ಮ!.. ಯಾರನ್ನ...

ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಅಣ್ಣ,ಸಿಬಿಐ ಅಧಿಕಾರಿಗಳಿಗೆ ಧನ್ಯವಾದ ಎನ್ನುವ ತಮ್ಮ!.. ಯಾರನ್ನ ನಂಬೋದು ಹೇಳಿ?..

- Advertisement -
- Advertisement -

ಬೆಂಗಳೂರು: ನಿನ್ನೆ ನಡೆದ ದಾಳಿ ವೇಳೆ ಸಿಬಿಐ ಅಧಿಕಾರಿಗಳು ನನ್ನ ಪಿಎಗೆ ಹೊಡೆದಿದ್ದಾರೆ,ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದರು.

ಇನ್ನೊಂದೆಡೆ, ಟ್ವೀಟ್​ ಮೂಲಕ ಸಿಬಿಐ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿರುವ ಅವರ ಸಹೋದರ, ಸಂಸದ ಡಿ.ಕೆ.ಸುರೇಶ್​, ಕನಕಪುರ, ಬೆಂಗಳೂರು ಮತ್ತು ದೆಹಲಿಯ ನಮ್ಮ ಮನೆ ಮತ್ತು ಕಚೇರಿಗಳಿಗೆ ಬಂದು ಯಾವುದೇ ಕಿರುಕುಳ ನೀಡದೇ ವೃತ್ತಿಪರವಾಗಿ ನಡೆದುಕೊಂಡರು ಎಂದಿದ್ದಾರೆ. ಅಣ್ಣ ತಮ್ಮಂದಿರ ಈ ಹೇಳಿಕೆ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಸಾಮಾಜಿಕ ಜಾಲ ತಾಣಗಳಲ್ಲಿ ಸದ್ದು ಮಾಡುತ್ತಿದೆ.

- Advertisement -

Latest News

error: Content is protected !!