Thursday, June 4, 2026
Homeತಾಜಾ ಸುದ್ದಿಕೋವಿಡ್ ಸೋಂಕಿಗೆ ಹಿರಿಯ ಹೋರಾಟಗಾರ ಬಲಿ!..

ಕೋವಿಡ್ ಸೋಂಕಿಗೆ ಹಿರಿಯ ಹೋರಾಟಗಾರ ಬಲಿ!..

- Advertisement -
- Advertisement -

ಕಲಬುರಗಿ: ಇಲ್ಲಿನ ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ , ಹಿರಿಯ ಹೋರಾಟಗಾರ, ರೈತ ಮತ್ತು ಕಾರ್ಮಿಕ ಮುಖಂಡರಾದ ಮಾರುತಿ ಮಾನ್ಪಡೆ (65) ನಿಧನರಾಗಿದ್ದಾರೆ. ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ರೈತ, ಹೋರಾಟದಲ್ಲಿ ತೊಡಗಿದ್ದ ಮಾರುತಿ ಮಾನ್ಪಡೆ ಅವರು ಅನಾರೋಗ್ಯದಿಂದ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಸೋಂಕು ದೃಢಪಟ್ಟ ನಂತರ ಸೋಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು ಎಂದು ಆಪ್ತ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!