Friday, June 5, 2026
Homeತಾಜಾ ಸುದ್ದಿದಸರಾ ಮುಗಿಯುತ್ತಿದ್ದಂತೆ ಹರಕೆ ತೀರಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ದಸರಾ ಮುಗಿಯುತ್ತಿದ್ದಂತೆ ಹರಕೆ ತೀರಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

- Advertisement -
- Advertisement -

ಮೈಸೂರು: ನಾಡಹಬ್ಬ ಮೈಸೂರು ದಸರಾ ಯಶಸ್ಸಿಗಾಗಿ ಹರಕೆ ಹೊತ್ತಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಕುಟುಂಬ ಸದಸ್ಯರೊಂದಿಗೆ ಹರಕೆ ತೀರಿಸಿದ್ದಾರೆ.

‌ನಾಡಿನ ಅಧಿ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆದಿದ್ದಾರೆ.

ರೋಹಿಣಿ ಸಿಂಧೂರಿ ದಸರಾ ಹೊತ್ತಿನಲ್ಲೇ ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದರು. ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಬೆಟ್ಟಕ್ಕೆ ತೆರಳಿದ ರೋಹಿಣಿ ಕುಟುಂಬ ಹರಕೆ ತೀರಿಸಿದೆ.

- Advertisement -

Latest News

error: Content is protected !!