- Advertisement -
- Advertisement -
ಕಾರ್ಕಳ :ಕ್ವಾಲೀಸ್ ವಾಹನದ ಟಯರ್ ಸಿಡಿದು ಯುವಕ ಸಾವನ್ನಪ್ಪಿದ ಘಟನೆ ಕುತ್ಲೂರು ಸಮೀಪದ ಕುಕ್ಕುಜೆಯಲ್ಲಿ ನಡೆದಿದೆ. ಕೋಲಾರದ ನರ್ಸಾಪುರದ ರಾಕೇಶ್ (24) ಮೃತ ದುರ್ದೈವಿ.
ನಿನ್ನೆ ಕೋಲಾರದ ನರ್ಸಾಪುರದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕ್ವಾಲೀಸ್ ವಾಹನದ ಟಯರ್ ಸಿಡಿದು ವಾಹನ ಪಲ್ಟಿಯಾಗಿದೆ.ಘಟನೆಯಲ್ಲಿ ಕ್ವಾಲೀಸ್ ನಲ್ಲಿದ್ದ ಮೋಹನ್ ಹಾಗೂ ರಾಕೇಶ್ ಎಂಬವರಿಗೆ ಗಂಭೀರ ಗಾಯಗಳಾಗಿತ್ತು.ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆ ತರಲಾಗಿತ್ತು.ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಲೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ರಾಕೇಶ್ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
- Advertisement -