Tuesday, April 30, 2024
Homeತಾಜಾ ಸುದ್ದಿಲಾರಿ-ಕಾರು ನಡುವೆ ಅಪಘಾತ: ರಾಜ್ಯದ ಮಾಜಿ ಮುಖ್ಯಮಂತ್ರಿಯ ಪುತ್ರ, ಸೊಸೆ ಆಸ್ಪತ್ರೆಗೆ ದಾಖಲು

ಲಾರಿ-ಕಾರು ನಡುವೆ ಅಪಘಾತ: ರಾಜ್ಯದ ಮಾಜಿ ಮುಖ್ಯಮಂತ್ರಿಯ ಪುತ್ರ, ಸೊಸೆ ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ದಾವಣಗೆರೆ: ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ, ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಹಾಗೂ ಪತ್ನಿ ಅಂಚಲ್​ ಸಂಚರಿಸುತ್ತಿದ್ದ ಕಾರ್ ಈ ಲಾರಿಯೊಂದು ಗುದ್ದಿದ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡ ಬಳಿ ನಡೆದಿದೆ.

ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಮತ್ತು ಪತ್ನಿ ಅಂಚಲ್​ಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಡಿವೈಡರ್ ಬಳಿ ಲಾರಿ ಹಾಗೂ ಪ್ರಶಾಂತ್ ಶೆಟ್ಟರ್ ಪ್ರಯಾಣಿಸುತ್ತಿದ್ದ ಲ್ಯಾಂಡ್ ರೋವರ್ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನ ಚಾಲಕನಿಗೂ ಗಾಯಗಳಾಗಿವೆ.

ಜಗದೀಶ್ ಶೆಟ್ಟರ್​ರ ಪುತ್ರ ಮತ್ತು ಸೊಸೆ ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್ ಐ ಕಿರಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಪ್ರಾಥಮಿಕ ಚಿಕಿತ್ಸೆ ಪಡೆದು ಜಗದೀಶ್ ಶೆಟ್ಟರ್ ಪುತ್ರ ಹಾಗೂ ಸೊಸೆ ಹುಬ್ಬಳ್ಳಿಗೆ ತೆರಳಿದ್ದಾರೆಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!