- Advertisement -
- Advertisement -
ಮಂಗಳೂರು, ಡಿ.19: ಯುವ ಸಬಲೀಕರಣ ನಿಗಮ ಸ್ಥಾಪನೆ, ಯುವಜನ ಹಕ್ಕು ಹಾಗೂ ಯುವಜನ ಆಯೋಗ ಜಾರಿಗೊಳಿಸುಂತೆ ನಗರದ ಯುವ ಮುನ್ನಡೆಯ ಯುವಿಗಳು ಜಿಲ್ಲಾಧಿಕಾರಿ ಸೇರಿದಂತೆ ಸಂಸದ, ಸಚಿವ ಹಾಗೂ ಶಾಸಕರಿಗೆ ಮನವಿ ಸಲ್ಲಿಸಿದರು.
ಯುವ ಮುನ್ನಡೆ ತಂಡವು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಸಂಸದ ನಳೀನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿಯವರ ಕಚೇರಿಗಳಿಗೆ ಭೇಟಿ ನೀಡಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಈ ಸಂಧರ್ಭ ಯುವ ಮುನ್ನಡೆಯ ಮುಂದಾಳುಗಳಾದ ಅಶ್ವಿನಿ, ಫಾತಿಮಾ ಸಫಾ, ನೇಹಾ, ಆಕಾಶ್, ಪ್ರಿಯಾಂಕ ಪ್ರಾಣೇಶ್ ಉಪಸ್ಥಿತಿದರಿದ್ದರು.
- Advertisement -