- Advertisement -
- Advertisement -
ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ಘಟಕ ದ ವತಿಯಿಂದ ಇಂದು ದೇಶ ವಿರೋಧಿ ಘೋಷಣೆಗಳು ಕೂಗಿದಂತಹ ಮತಾಂಧ SDPI ನ ವಿರುದ್ಧ ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿ ಪ್ರತಿಭಟನೆ ನಡೆಸಲಾಯ್ತು. ಈ ಪ್ರತಿಭಟನೆಯಲ್ಲಿ ಸಾಮಾಜಿಕ ಕಾರ್ಯಕರ್ತರಾದ ಪ್ರಶಾಂತ್ ಶೆಟ್ಟಿ ಕರಂಬಾರು ಮಾತನಾಡಿ ದೇಶ ವಿರೋಧಿ ಘೋಷಣೆಗಳು ಕೂಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ SDPI ಸಂಘಟನೆಯನ್ನು ದೇಶದಾದ್ಯಂತ ನಿಷೇಧಿಸಬೇಕು ಎಂದು ಆಗ್ರಹಿಸಿದರು.

ಈ ಪ್ರತಿಭಟನಾ ಸಭೆಯಲ್ಲಿ ಸುಮಾರು 100 ಕೂ ಹೆಚ್ಚು ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ಪಾಲ್ಗೊಂಡಿದ್ದರು. ಹಾಗೂ ವಿದ್ಯಾರ್ಥಿ ಪರಿಷತ್ ನ ಹಿರಿಯ ಕಾರ್ಯಕರ್ತರಾದ ಯತೀಶ್ ಶೆಟ್ಟಿ ಫಣೆಕ್ಕರ, ಪ್ರಜ್ವಲ್ ಶೆಟ್ಟಿ ಕರಂಬಾರು ಹಾಗೂ ವಿದ್ಯಾರ್ಥಿ ಪರಿಷತ್ ನ ರಾಜ್ಯ ಕಾರ್ಯಕಾರಣಿ ಸದಸ್ಯ ಶರತ್, ತಾಲೂಕು ಸಂಚಾಲಕ ಮೇಘರಾಜ್, ಬೆಳ್ತಂಗಡಿ ನಗರ ಕಾರ್ಯದರ್ಶಿ ಸುಮಂತ್, ABVP ಯ ಪ್ರಮುಖ ಕಾರ್ಯಕರ್ತರು ಭಾಗಿಯಾಗಿದ್ದರು.

- Advertisement -