- Advertisement -
- Advertisement -
ಬೆಂಗಳೂರು: ವಂಚನೆ ಆರೋಪದಲ್ಲಿ ಬಂಧಿತರಾಗಿರುವ ಯುವರಾಜ್ನಿಂದ 75 ಲಕ್ಷ ಹಣ ಪಡೆದಿರುವ ಆರೋಪ ಎದುರಿಸುತ್ತಿರುವ ಸ್ಯಾಂಡಲ್ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.
ರಾಜಕಾರಣಿ, ಸರ್ಕಾರಿ ನೌಕರರಿಗೆ ಸೇರಿದಂತೆ ಹಲವರಿಗೆ ಹಣ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಯುವರಾಜ್ನನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧಿತರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿ ಪರಿಶೀಲಿಸಿದಾಗ ರಾಧಿಕಾ ಕುಮಾರಸ್ವಾಮಿ ಬ್ಯಾಂಕ್ ಅಕೌಂಟ್ಗೆ ಹಣ ಹಾಕಿರುವುದು ಬೆಳಕಿಗೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ರಾಧಿಕಾ ಸುದ್ದಿಗೋಷ್ಠಿ ನಡೆಸಿ, ಸಿನಿಮಾ ನಿರ್ಮಾಣಕ್ಕಾಗಿ ಯುವರಾಜ್ನಿಂದ 15 ಲಕ್ಷ ಹಾಗೂ ಬೇರೆ ಖಾತೆಯಿಂದ 60 ಲಕ್ಷ ಹಣ ಬಂದಿರುವುದಾಗಿ ಹೇಳಿದ್ದಾರೆ. ರಾಧಿಕಾ ಹೇಳಿಕೆಯಲ್ಲಿ ಗೊಂದಲ ಮೂಡಿದ ಕಾರಣ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವುದಾಗಿ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
- Advertisement -