Friday, June 27, 2025
Homeತಾಜಾ ಸುದ್ದಿಶಿವಮೊಗ್ಗ ಸ್ಫೋಟದ ಬಳಿಕ ಮತ್ತೊಂದು ಅನಾಹುತ: ತುಮಕೂರಿನಲ್ಲಿ ಜಿಲೆಟಿನ್ ಬ್ಲಾಸ್ಟ್ ಗೆ ಮನೆ ಛಿದ್ರ ಛಿದ್ರ

ಶಿವಮೊಗ್ಗ ಸ್ಫೋಟದ ಬಳಿಕ ಮತ್ತೊಂದು ಅನಾಹುತ: ತುಮಕೂರಿನಲ್ಲಿ ಜಿಲೆಟಿನ್ ಬ್ಲಾಸ್ಟ್ ಗೆ ಮನೆ ಛಿದ್ರ ಛಿದ್ರ

spot_img
- Advertisement -
- Advertisement -

ತುಮಕೂರು: ಶಿವಮೊಗ್ಗದ ಅನಾಹುತ ಮಾಸುವ ಮುನ್ನವೇ ಮತ್ತೊಂದು ಅದೇ ಮಾದರಿ ಘಟನೆ ನಡೆದಿದೆ. ಜಿಲೆಟಿನ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಸಂಪೂರ್ಣ ಧ್ವಂಸವಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ವರದಿಯಾಗಿ ನಡೆದಿದೆ.

ತುಮಕೂರಿನ ಹೊನ್ನುಡುಕೆ ಸಮೀಪ ಮಸ್ಕಲ್ ಗ್ರಾಮದಲ್ಲಿ ನಡೆದ ಸ್ಫೋಟದ ಘಟನೆಯಲ್ಲಿ ಮನೆಯು ಸಂಪೂರ್ಣ ನಾಶವಾಗಿದ್ದು ಅದೃಷ್ಟವಶಾತ್ ಯಾವ ಪ್ರಾಣಹಾನಿ ಸಂಭವಿಸಿಲ್ಲ.

ಲಕ್ಷ್ಮಿಕಾಂತ್ ಎನ್ನುವವರಿಗೆ ಸೇರಿದ ಮನೆ ಇದಾಗಿದ್ದು ಸ್ಫೋಟದ ಪರಿಣಾಮ ಗೋಡೆಗಳು ಉರುಳಿದೆ. ಘಟನಾ ವೇಳೆ ಮನೆಯಲ್ಲಿದ್ದ ಲಕ್ಷ್ಮಿಕಾಂತ್ ಅವರ ಪತ್ನಿ ಸುವರ್ಣಮ್ಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪತಿ ಲಕ್ಷ್ಮಿಕಾಂತ್ ಮಕ್ಕಳನ್ನು ಶಾಲೆಗೆ ಬಿಡಲು ತೆರಳಿದ್ದ ವೇಳೆ ಘಟನೆ ನಡೆದಿದ್ದು ಭಾರೀ ಅನಾಹುತ ತಪ್ಪಿದೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಲಕ್ಷ್ಮೀಕಾಂತ್ ಅವರು ಕಲ್ಲು ಬಂಡೆಗಳ ಸ್ಫೋಟ, ಮಣ್ಣು ಅಗೆತದಂತಹ ಕೆಲಸಕ್ಕೆ ನೆರವಾಗುತ್ತಿದ್ದರು. ಮಸ್ಕಲ್ ಗ್ರಾಮದ ಶಾಲೆಯ ಸಮೀಪ ಬಂಡೆಗಳ ಒಡೆಯಲು ಜಿಲೆಟಿನ್ ಕಡ್ಡಿಗಳನ್ನು ತರಿಸಿದ್ದು ಇದರಲ್ಲಿ ಉಳಿದವನ್ನು ಲಕ್ಷ್ಮಿಕಾಂತ್ ತಮ್ಮ ಮನೆಯಲ್ಲಿ ಇರಿಸಿಕೊಂಡಿದ್ದರೆಂದು ಹೇಳಲಾಗಿದೆ. ಸದ್ಯ ಬಾಂಬ್ ನಿಷ್ಕ್ರಿಯ ದಳ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮನೆಯ ಸುತ್ತಲಿನ 200 ಮೀ. ವ್ಯಾಪ್ತಿಯಲ್ಲಿ ಜನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

- Advertisement -
spot_img

Latest News

error: Content is protected !!